ಮೈಸೂರು

ಸರೋಜಾದೇವಿ ಅಂತ್ಯಕ್ರಿಯೆ : ಮೇರುನಟಿಗೆ ಕಂಬನಿಯ ವಿದಾಯ

ಬೆಂಗಳೂರು : ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮಂಗಳವಾರ ಅವರ ಹುಟ್ಟೂರು ಚನ್ನಪಟ್ಟಣದ ದಶಾವರದಲ್ಲಿ ಅಭಿಮಾನಿಗಳ ಶೋಕಸಾಗರದ ನಡುವೆ ನೆರವೇರಿತು. ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ.

ಮಂಗಳವಾರ ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ ಅಂತ್ಯ ಸಂಸ್ಕಾರ ನಡೆದಿದೆ. ಸರೋಜಾದೇವಿ ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಅವರ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಹಾಜರಿದ್ದರು.

ಅಂತ್ಯಸಂಸ್ಕಾರಕ್ಕೂ ಮುನ್ನ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಪಲ್ಲಕ್ಕಿಯಲ್ಲಿಟ್ಟು ಅವರ ಪಾರ್ಥೀವ ಶರೀರವನ್ನು ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು.

1955 ರಲ್ಲಿ ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಸರೋಜಾದೇವಿ ಅವರು ಅಭಿನಯದ ಮೊದಲ ಚಿತ್ರವೇ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. 1955 ರಲ್ಲಿ ಸರೋಜ ದೇವಿ ಶ್ರೀ ರಾಮ ಪೂಜ ಎಂಬ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಭಾರತೀಯ ಚಿತ್ರರಂಗದಲ್ಲಿ ಮಿಂಚಿದ್ದ ಸರೋಜ ದೇವಿ ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿ ಸೈ ಅನಿಸಿಕೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

3 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

3 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

3 hours ago