ಮೈಸೂರು

ಗಮನ ಸೆಳೆದ ಸವ್ವೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ-2025

ಮೈಸೂರು : ಶಾಲೆ ಪರಿಸರ ಮತ್ತು ಶಿಕ್ಷಕರ ತೊಡಗುವಿಕೆ ಎರಡೂ ಪೂರಕವಾಗಿದ್ದಲ್ಲಿ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಕರ್ನಾಟ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಿನ ಘಟಕದ ಅಧ್ಯಕ್ಷರಾದ ಎಂ.ಸಿ.ರಾಜೇಶ್ವರಿ ಹೇಳಿದರು.

ಎಚ್ ಡಿ ಕೋಟೆ ತಾಲ್ಲೂಕಿನ ಸವ್ವೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಮನ್ವಯಾಧಿಕಾರಿಗಳ ಕಛೇರಿ, ಕ್ಲಸ್ಟರ್ ಸಂಪನ್ಮೂಲ ಕೇಂದ್ರ ಸವ್ವೆ ಇವರ ಸಂಯುಕ್ತಾಶ್ರಯದಲ್ಲಿಒಂದನೇ ತರಗತಿಯಿಂದ ಐದನೇ ತರಗತಿಯ ಮಕ್ಕಳಿಗೆ ಶುಕ್ರವಾರ ಅಯೋಜಿಸಿದ್ದ ಕ್ಲಸ್ಟರ್ ಮಟ್ಟದ “ಕಲಿಕಾ ಹಬ್ಬ 2025ರ ಕಾಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜಾರಿಗೊಳಿಸಿರುವ ಕಲಿಕಾ ಹಬ್ಬದಿಂದಾಗಿ ಮಕ್ಕಳಿಗೆ ಸ್ಫೂರ್ತಿ ಬರಲಿದ್ದು, ಕಥೆ, ಸಾಹಿತ್ಯ, ಓದು, ಕ್ರೀಡೆ ಮತ್ತು ನಲಿಕಲಿ ಹಮ್ಮಿಕೊಂಡು ಪೂರಕ ವಾತಾವರಣ ಸೃಷ್ಠಿಸುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಿಕ್ಷಣದ ಜೊತೆಗೆ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿರಂತರವಾಗಿ ಕಲಿಯುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಕಲಿಕಾ ಹಬ್ಬವು ಮಕ್ಕಳಲ್ಲಿ ಹೊಸ ಉತ್ಸಾಹ ಮೂಡಿಸುತ್ತದೆ. ಮಕ್ಕಳು ಮತ್ತು ಶಿಕ್ಷಕರು ಕಲಿಕಾ ಹಬ್ಬದಲ್ಲಿ ಭಾಗವಹಿಸಬೇಕು. ಮಕ್ಕಳಿಗೆ ಪ್ರಶ್ನೆ ಮಾಡುವ ಹಾಗೂ ಶೈಕ್ಷಣಿಕ ಮನೋಭಾವ ವೃದ್ಧಿಯಾಗುವುದರ ಜೊತೆಗೆ ಮಕ್ಕಳಲ್ಲಿ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಕಲಿಕಾ ಹಬ್ಬ ಆಯೋಜಿಸಿರುವುದು ಸಂತೋಷದ ಸಂಗತಿ ಎಂದರು.

ಸವ್ವೆ ಕ್ಲಸ್ಟರ್ ಸಂಪನ್ಮೂಲದ ಸಂಯೋಜಕ ಕೆಂಪರಾಜು ಎಚ್.ಮಟಕೆರೆ ಮಾತನಾಡಿ ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದ್ದು ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ಅಯೋಜನೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಿನ ಘಟಕದ ಪ್ರಧಾನ ಕಾಯದರ್ಶಿ ಎಮ್.ಯಶ್ವಂತ್ ಕುಮಾರ್,  ಜಯರಾಮೇಗೌಡ,ಆನಂದ್, ಮುದ್ದನಾಯಕ ಮತ್ತಿತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

3 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

3 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

3 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

3 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

3 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

3 hours ago