ಮೈಸೂರು

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್‌ ಪಲ್ಟಿ ಪ್ರಕರಣ : ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ 30ಲಕ್ಷ ಪರಿಹಾರ

ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್‌ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ ಜಿ.ಗೋಪಿ. ಜೆ.ಜಗದೀಶ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ ಆಡಳಿತ ಮಂಡಳಿ ಸದಸ್ಯರು, ಮೃತ ಬಾಲಕನ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಿದ್ದಲ್ಲದೆ, ಅಂತ್ಯ ಸಂಸ್ಕಾರದ ಖರ್ಚುವೆಚ್ಚಗಳಿಗೆ ಸಹಕಾರ ನೀಡಲು ಒಪ್ಪಿಗೆ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆ ಶಾಲೆಯ ಕಚೇರಿಗೆ ತೆರಳಿದ ಶಾಸಕದ್ವಯರು ಅಲ್ಲಿನ ಆಡಳಿತ ಮಂಡಳಿ ಹಾಗೂ ಪೋಷಕರ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದಾರೆ. ನಂತರ ಇಬ್ಬರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ 30 ಲಕ್ಷ ರೂ. ಪರಿಹಾರದ ಚೆಕ್ ಕೊಡಿಸಿದ್ದಾರೆ.

ಇದನ್ನೂ ಓದಿ:-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ

ಇದೇ ವೇಳೆ ಸಿದ್ದಾಪುರ ಬಳಿ ಹೊನ್ನಾವರ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಮೈಸೂರಿಗೆ ಕರೆತರಲಾಗುತ್ತಿದೆ. ಕತ್ತಿನ ಭಾಗದಲ್ಲಿ ಗಂಭೀರ ಗಾಯವಾಗಿರುವ ಗೌತಮಿ ಖುಷಿ ಹಾಗೂ ಕಾಯಕ್ ಎಂಬವರಿಗೆ ಮಣಿಪಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

11 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

12 hours ago