ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ.
ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ ಜಿ.ಗೋಪಿ. ಜೆ.ಜಗದೀಶ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ ಆಡಳಿತ ಮಂಡಳಿ ಸದಸ್ಯರು, ಮೃತ ಬಾಲಕನ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಿದ್ದಲ್ಲದೆ, ಅಂತ್ಯ ಸಂಸ್ಕಾರದ ಖರ್ಚುವೆಚ್ಚಗಳಿಗೆ ಸಹಕಾರ ನೀಡಲು ಒಪ್ಪಿಗೆ ನೀಡಿದ್ದಾರೆ.
ಸೋಮವಾರ ಬೆಳಿಗ್ಗೆ ಶಾಲೆಯ ಕಚೇರಿಗೆ ತೆರಳಿದ ಶಾಸಕದ್ವಯರು ಅಲ್ಲಿನ ಆಡಳಿತ ಮಂಡಳಿ ಹಾಗೂ ಪೋಷಕರ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದಾರೆ. ನಂತರ ಇಬ್ಬರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ 30 ಲಕ್ಷ ರೂ. ಪರಿಹಾರದ ಚೆಕ್ ಕೊಡಿಸಿದ್ದಾರೆ.
ಇದನ್ನೂ ಓದಿ:-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ
ಇದೇ ವೇಳೆ ಸಿದ್ದಾಪುರ ಬಳಿ ಹೊನ್ನಾವರ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಮೈಸೂರಿಗೆ ಕರೆತರಲಾಗುತ್ತಿದೆ. ಕತ್ತಿನ ಭಾಗದಲ್ಲಿ ಗಂಭೀರ ಗಾಯವಾಗಿರುವ ಗೌತಮಿ ಖುಷಿ ಹಾಗೂ ಕಾಯಕ್ ಎಂಬವರಿಗೆ ಮಣಿಪಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…