ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ.
ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ ಜಿ.ಗೋಪಿ. ಜೆ.ಜಗದೀಶ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ ಆಡಳಿತ ಮಂಡಳಿ ಸದಸ್ಯರು, ಮೃತ ಬಾಲಕನ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಿದ್ದಲ್ಲದೆ, ಅಂತ್ಯ ಸಂಸ್ಕಾರದ ಖರ್ಚುವೆಚ್ಚಗಳಿಗೆ ಸಹಕಾರ ನೀಡಲು ಒಪ್ಪಿಗೆ ನೀಡಿದ್ದಾರೆ.
ಸೋಮವಾರ ಬೆಳಿಗ್ಗೆ ಶಾಲೆಯ ಕಚೇರಿಗೆ ತೆರಳಿದ ಶಾಸಕದ್ವಯರು ಅಲ್ಲಿನ ಆಡಳಿತ ಮಂಡಳಿ ಹಾಗೂ ಪೋಷಕರ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದಾರೆ. ನಂತರ ಇಬ್ಬರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ 30 ಲಕ್ಷ ರೂ. ಪರಿಹಾರದ ಚೆಕ್ ಕೊಡಿಸಿದ್ದಾರೆ.
ಇದನ್ನೂ ಓದಿ:-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ
ಇದೇ ವೇಳೆ ಸಿದ್ದಾಪುರ ಬಳಿ ಹೊನ್ನಾವರ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಮೈಸೂರಿಗೆ ಕರೆತರಲಾಗುತ್ತಿದೆ. ಕತ್ತಿನ ಭಾಗದಲ್ಲಿ ಗಂಭೀರ ಗಾಯವಾಗಿರುವ ಗೌತಮಿ ಖುಷಿ ಹಾಗೂ ಕಾಯಕ್ ಎಂಬವರಿಗೆ ಮಣಿಪಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…