ಮೈಸೂರು

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್‌ ಪಲ್ಟಿ ಪ್ರಕರಣ : ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ 30ಲಕ್ಷ ಪರಿಹಾರ

ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್‌ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ ಜಿ.ಗೋಪಿ. ಜೆ.ಜಗದೀಶ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ ಆಡಳಿತ ಮಂಡಳಿ ಸದಸ್ಯರು, ಮೃತ ಬಾಲಕನ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಿದ್ದಲ್ಲದೆ, ಅಂತ್ಯ ಸಂಸ್ಕಾರದ ಖರ್ಚುವೆಚ್ಚಗಳಿಗೆ ಸಹಕಾರ ನೀಡಲು ಒಪ್ಪಿಗೆ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆ ಶಾಲೆಯ ಕಚೇರಿಗೆ ತೆರಳಿದ ಶಾಸಕದ್ವಯರು ಅಲ್ಲಿನ ಆಡಳಿತ ಮಂಡಳಿ ಹಾಗೂ ಪೋಷಕರ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದಾರೆ. ನಂತರ ಇಬ್ಬರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ 30 ಲಕ್ಷ ರೂ. ಪರಿಹಾರದ ಚೆಕ್ ಕೊಡಿಸಿದ್ದಾರೆ.

ಇದನ್ನೂ ಓದಿ:-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ

ಇದೇ ವೇಳೆ ಸಿದ್ದಾಪುರ ಬಳಿ ಹೊನ್ನಾವರ ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಮೈಸೂರಿಗೆ ಕರೆತರಲಾಗುತ್ತಿದೆ. ಕತ್ತಿನ ಭಾಗದಲ್ಲಿ ಗಂಭೀರ ಗಾಯವಾಗಿರುವ ಗೌತಮಿ ಖುಷಿ ಹಾಗೂ ಕಾಯಕ್ ಎಂಬವರಿಗೆ ಮಣಿಪಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago