ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಕಾನೂನು ಕಾಲೇಜಿನ (JSS Law College Mysuru) ಮೂವರು ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ವಿಜೇತರಾಗಿದ್ದಾರೆ. ಮಾರ್ಚ್ 11ರಂದು ಬೆಂಗಳೂರಿನಲ್ಲಿ ರೇವಾ ವಿಶ್ವವಿದ್ಯಾಲಯದ (REVA University Bengaluru) ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಆಯೋಜಿಸಿದ್ದ ಮೂರು ದಿನಗಳ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 27 ತಂಡಗಳು ಭಾಗವಹಿಸಿದ್ದವು. ರೋಹನ್ ವಿ ಗಂಗಡ್ಕರ್ ಮೈಸೂರಿನ ಹಿರಿಯ ವಕೀಲರು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆಯ ಗೌರವ ಸಂಪಾದಕ ಹೆಚ್. ಎನ್. ವೆಂಕಟೇಶ್ ಅವರ ಪುತ್ರನಾಗಿದ್ದಾನೆ.
ವಿಜೇತರಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ಟ್ರೋಫಿ ಮತ್ತು 20,000 ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಮತ್ತು ನ್ಯಾಯಮೂರ್ತಿ ಇ ಸೀತಾರಾಮಯ್ಯ ಇಂದಿರೇಶ್ ಅವರು ಬಹುಮಾನ ವಿತರಣೆ ಮಾಡಿದರು. ಈ ಸ್ಪರ್ಧೆಯಲ್ಲಿ ಸ್ಕೂಲ್ ಆಫ್ ಎಕ್ಸಲೆನ್ಸ್ ಇನ್ ಲಾ ಚೆನ್ನೈ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್…
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…