ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಕಾನೂನು ಕಾಲೇಜಿನ (JSS Law College Mysuru) ಮೂವರು ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ವಿಜೇತರಾಗಿದ್ದಾರೆ. ಮಾರ್ಚ್ 11ರಂದು ಬೆಂಗಳೂರಿನಲ್ಲಿ ರೇವಾ ವಿಶ್ವವಿದ್ಯಾಲಯದ (REVA University Bengaluru) ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಆಯೋಜಿಸಿದ್ದ ಮೂರು ದಿನಗಳ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 27 ತಂಡಗಳು ಭಾಗವಹಿಸಿದ್ದವು. ರೋಹನ್ ವಿ ಗಂಗಡ್ಕರ್ ಮೈಸೂರಿನ ಹಿರಿಯ ವಕೀಲರು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆಯ ಗೌರವ ಸಂಪಾದಕ ಹೆಚ್. ಎನ್. ವೆಂಕಟೇಶ್ ಅವರ ಪುತ್ರನಾಗಿದ್ದಾನೆ.
ವಿಜೇತರಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ಟ್ರೋಫಿ ಮತ್ತು 20,000 ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಮತ್ತು ನ್ಯಾಯಮೂರ್ತಿ ಇ ಸೀತಾರಾಮಯ್ಯ ಇಂದಿರೇಶ್ ಅವರು ಬಹುಮಾನ ವಿತರಣೆ ಮಾಡಿದರು. ಈ ಸ್ಪರ್ಧೆಯಲ್ಲಿ ಸ್ಕೂಲ್ ಆಫ್ ಎಕ್ಸಲೆನ್ಸ್ ಇನ್ ಲಾ ಚೆನ್ನೈ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…