ಮೈಸೂರು

ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸಾಂಸ್ಕೃತಿಕ ನಗರಿಯ ಪ್ರತಿಭೆಗಳು

ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ (2023) ವಿಜೇತರಾಗಿದ್ದಾರೆ.

ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ (JSS Law College Mysuru) ಮೂವರು ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ವಿಜೇತರಾಗಿದ್ದಾರೆ. ಮಾರ್ಚ್ 11ರಂದು ಬೆಂಗಳೂರಿನಲ್ಲಿ ರೇವಾ ವಿಶ್ವವಿದ್ಯಾಲಯದ (REVA University Bengaluru) ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಆಯೋಜಿಸಿದ್ದ ಮೂರು ದಿನಗಳ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 27 ತಂಡಗಳು ಭಾಗವಹಿಸಿದ್ದವು. ರೋಹನ್ ವಿ ಗಂಗಡ್ಕರ್ ಮೈಸೂರಿನ ಹಿರಿಯ ವಕೀಲರು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆಯ ಗೌರವ ಸಂಪಾದಕ ಹೆಚ್. ಎನ್. ವೆಂಕಟೇಶ್ ಅವರ ಪುತ್ರನಾಗಿದ್ದಾನೆ.

ವಿಜೇತರಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ಟ್ರೋಫಿ ಮತ್ತು 20,000 ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಮತ್ತು ನ್ಯಾಯಮೂರ್ತಿ ಇ ಸೀತಾರಾಮಯ್ಯ ಇಂದಿರೇಶ್ ಅವರು ಬಹುಮಾನ ವಿತರಣೆ ಮಾಡಿದರು. ಈ ಸ್ಪರ್ಧೆಯಲ್ಲಿ ಸ್ಕೂಲ್ ಆಫ್ ಎಕ್ಸಲೆನ್ಸ್ ಇನ್ ಲಾ ಚೆನ್ನೈ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

2 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

3 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

14 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

15 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

16 hours ago