ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಕಾನೂನು ಕಾಲೇಜಿನ (JSS Law College Mysuru) ಮೂವರು ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ವಿಜೇತರಾಗಿದ್ದಾರೆ. ಮಾರ್ಚ್ 11ರಂದು ಬೆಂಗಳೂರಿನಲ್ಲಿ ರೇವಾ ವಿಶ್ವವಿದ್ಯಾಲಯದ (REVA University Bengaluru) ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಆಯೋಜಿಸಿದ್ದ ಮೂರು ದಿನಗಳ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 27 ತಂಡಗಳು ಭಾಗವಹಿಸಿದ್ದವು. ರೋಹನ್ ವಿ ಗಂಗಡ್ಕರ್ ಮೈಸೂರಿನ ಹಿರಿಯ ವಕೀಲರು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆಯ ಗೌರವ ಸಂಪಾದಕ ಹೆಚ್. ಎನ್. ವೆಂಕಟೇಶ್ ಅವರ ಪುತ್ರನಾಗಿದ್ದಾನೆ.
ವಿಜೇತರಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ಟ್ರೋಫಿ ಮತ್ತು 20,000 ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಮತ್ತು ನ್ಯಾಯಮೂರ್ತಿ ಇ ಸೀತಾರಾಮಯ್ಯ ಇಂದಿರೇಶ್ ಅವರು ಬಹುಮಾನ ವಿತರಣೆ ಮಾಡಿದರು. ಈ ಸ್ಪರ್ಧೆಯಲ್ಲಿ ಸ್ಕೂಲ್ ಆಫ್ ಎಕ್ಸಲೆನ್ಸ್ ಇನ್ ಲಾ ಚೆನ್ನೈ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…