ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ.
ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ ವಾಹನಗಳನ್ನು ಹೀಗೆ ಮೂಲೆಗೆ ತಳ್ಳಿ ಹೊಸ ವಾಹನಗಳನ್ನು ಖರೀದಿ ಮಾಡುವ ಪಾಲಿಕೆ ಅಧಿಕಾರಿಗಳು ಹಳೇ ವಾಹನಗಳ ನಿರ್ವಹಣೆ ಮರೆತು ಬಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.
ನಿರುಪಯುಕ್ತವಾಗಿ ನಿಂತಿರುವ ವಾಹನಗಳನ್ನು ದುರಸ್ತಿ ಮಾಡಿಸದೇ ಅಥವಾ ಹರಾಜಿಗೂ ಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು ಇದರಿಂದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಆಸ್ತಿ ನಾಶವಾಗುತ್ತಿದೆ.
ಕಸ ಸಂಗ್ರಹ ವಾಹನ, ಕಚೇರಿ ಬಳಕೆ ವಾಹನ, ಟ್ರಾಕ್ಟರ್, ಜೀಪು, ಟೆಂಪೋ, ಟಿಪ್ಪರ್ಗಳಂಥ ನೂರಾರು ವಾಹನಗಳಿದ್ದು ಇವುಗಳು ದುರಸ್ತಿಯಾಗದಿದ್ದರೆ ಇದರ ಹರಾಜು ಪ್ರಕ್ರಿಯೆ ಮಾಡಬೇಕು. ಇದರಿಂದ ಪಾಲಿಕೆಗೆ ಕೋಟ್ಯಾಂತರ ಆದಾಯವೂ ಸಿಗಲಿದೆ. ಯಾವುದನ್ನೂ ಮಾಡದೆ ಹಳೆ ವಾಹನಗಳನ್ನು ಈ ರೀತಿ ಬಿಟ್ಟಿರುವುದು ನಿಜಕ್ಕೂ ನಿರ್ಲಕ್ಷ್ಯ ಧೋರಣೆಯಲ್ಲದೇ ಬೇರೇನಲ್ಲ.
ಇನ್ನಾದರೂ ಪಾಲಿಕೆ ಅಧಿಕಾರಿಗಳು ಹೀಗೆ ನಶಿಸಿ ಹೋಗುತ್ತಿರುವ ವಾಹನಗಳ ವಿಲೇವಾರಿ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಆಸ್ತಿಯ ರಕ್ಷಣೆಗೆ ಮುಂದಾಗಬೇಕಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…
ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…
ಅಂಕಾರ: ಇಸ್ತಾನ್ಬುಲ್ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…
ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್…