ಮೈಸೂರು

ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿಯುತ್ತಿವೆ ಪಾಲಿಕೆ ವಾಹನಗಳು

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ.

ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ ವಾಹನಗಳನ್ನು ಹೀಗೆ ಮೂಲೆಗೆ ತಳ್ಳಿ ಹೊಸ ವಾಹನಗಳನ್ನು ಖರೀದಿ ಮಾಡುವ ಪಾಲಿಕೆ ಅಧಿಕಾರಿಗಳು ಹಳೇ ವಾಹನಗಳ ನಿರ್ವಹಣೆ ಮರೆತು ಬಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.

ನಿರುಪಯುಕ್ತವಾಗಿ ನಿಂತಿರುವ ವಾಹನಗಳನ್ನು ದುರಸ್ತಿ ಮಾಡಿಸದೇ ಅಥವಾ ಹರಾಜಿಗೂ ಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು ಇದರಿಂದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಆಸ್ತಿ ನಾಶವಾಗುತ್ತಿದೆ.

ಕಸ ಸಂಗ್ರಹ ವಾಹನ, ಕಚೇರಿ ಬಳಕೆ ವಾಹನ, ಟ್ರಾಕ್ಟರ್, ಜೀಪು, ಟೆಂಪೋ, ಟಿಪ್ಪರ್‌ಗಳಂಥ ನೂರಾರು ವಾಹನಗಳಿದ್ದು ಇವುಗಳು ದುರಸ್ತಿಯಾಗದಿದ್ದರೆ ಇದರ ಹರಾಜು ಪ್ರಕ್ರಿಯೆ ಮಾಡಬೇಕು. ಇದರಿಂದ ಪಾಲಿಕೆಗೆ ಕೋಟ್ಯಾಂತರ ಆದಾಯವೂ ಸಿಗಲಿದೆ. ಯಾವುದನ್ನೂ ಮಾಡದೆ ಹಳೆ ವಾಹನಗಳನ್ನು ಈ ರೀತಿ ಬಿಟ್ಟಿರುವುದು ನಿಜಕ್ಕೂ ನಿರ್ಲಕ್ಷ್ಯ ಧೋರಣೆಯಲ್ಲದೇ ಬೇರೇನಲ್ಲ.

ಇನ್ನಾದರೂ ಪಾಲಿಕೆ ಅಧಿಕಾರಿಗಳು ಹೀಗೆ ನಶಿಸಿ ಹೋಗುತ್ತಿರುವ ವಾಹನಗಳ ವಿಲೇವಾರಿ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಆಸ್ತಿಯ ರಕ್ಷಣೆಗೆ ಮುಂದಾಗಬೇಕಿದೆ.

andolana

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

48 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

1 hour ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

3 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

3 hours ago