ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ.
ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ ವಾಹನಗಳನ್ನು ಹೀಗೆ ಮೂಲೆಗೆ ತಳ್ಳಿ ಹೊಸ ವಾಹನಗಳನ್ನು ಖರೀದಿ ಮಾಡುವ ಪಾಲಿಕೆ ಅಧಿಕಾರಿಗಳು ಹಳೇ ವಾಹನಗಳ ನಿರ್ವಹಣೆ ಮರೆತು ಬಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.
ನಿರುಪಯುಕ್ತವಾಗಿ ನಿಂತಿರುವ ವಾಹನಗಳನ್ನು ದುರಸ್ತಿ ಮಾಡಿಸದೇ ಅಥವಾ ಹರಾಜಿಗೂ ಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು ಇದರಿಂದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಆಸ್ತಿ ನಾಶವಾಗುತ್ತಿದೆ.
ಕಸ ಸಂಗ್ರಹ ವಾಹನ, ಕಚೇರಿ ಬಳಕೆ ವಾಹನ, ಟ್ರಾಕ್ಟರ್, ಜೀಪು, ಟೆಂಪೋ, ಟಿಪ್ಪರ್ಗಳಂಥ ನೂರಾರು ವಾಹನಗಳಿದ್ದು ಇವುಗಳು ದುರಸ್ತಿಯಾಗದಿದ್ದರೆ ಇದರ ಹರಾಜು ಪ್ರಕ್ರಿಯೆ ಮಾಡಬೇಕು. ಇದರಿಂದ ಪಾಲಿಕೆಗೆ ಕೋಟ್ಯಾಂತರ ಆದಾಯವೂ ಸಿಗಲಿದೆ. ಯಾವುದನ್ನೂ ಮಾಡದೆ ಹಳೆ ವಾಹನಗಳನ್ನು ಈ ರೀತಿ ಬಿಟ್ಟಿರುವುದು ನಿಜಕ್ಕೂ ನಿರ್ಲಕ್ಷ್ಯ ಧೋರಣೆಯಲ್ಲದೇ ಬೇರೇನಲ್ಲ.
ಇನ್ನಾದರೂ ಪಾಲಿಕೆ ಅಧಿಕಾರಿಗಳು ಹೀಗೆ ನಶಿಸಿ ಹೋಗುತ್ತಿರುವ ವಾಹನಗಳ ವಿಲೇವಾರಿ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಆಸ್ತಿಯ ರಕ್ಷಣೆಗೆ ಮುಂದಾಗಬೇಕಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…