ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ.
ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ ವಾಹನಗಳನ್ನು ಹೀಗೆ ಮೂಲೆಗೆ ತಳ್ಳಿ ಹೊಸ ವಾಹನಗಳನ್ನು ಖರೀದಿ ಮಾಡುವ ಪಾಲಿಕೆ ಅಧಿಕಾರಿಗಳು ಹಳೇ ವಾಹನಗಳ ನಿರ್ವಹಣೆ ಮರೆತು ಬಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ.
ನಿರುಪಯುಕ್ತವಾಗಿ ನಿಂತಿರುವ ವಾಹನಗಳನ್ನು ದುರಸ್ತಿ ಮಾಡಿಸದೇ ಅಥವಾ ಹರಾಜಿಗೂ ಹಾಕದೇ ನಿರ್ಲಕ್ಷ್ಯ ವಹಿಸಲಾಗಿದ್ದು ಇದರಿಂದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಆಸ್ತಿ ನಾಶವಾಗುತ್ತಿದೆ.
ಕಸ ಸಂಗ್ರಹ ವಾಹನ, ಕಚೇರಿ ಬಳಕೆ ವಾಹನ, ಟ್ರಾಕ್ಟರ್, ಜೀಪು, ಟೆಂಪೋ, ಟಿಪ್ಪರ್ಗಳಂಥ ನೂರಾರು ವಾಹನಗಳಿದ್ದು ಇವುಗಳು ದುರಸ್ತಿಯಾಗದಿದ್ದರೆ ಇದರ ಹರಾಜು ಪ್ರಕ್ರಿಯೆ ಮಾಡಬೇಕು. ಇದರಿಂದ ಪಾಲಿಕೆಗೆ ಕೋಟ್ಯಾಂತರ ಆದಾಯವೂ ಸಿಗಲಿದೆ. ಯಾವುದನ್ನೂ ಮಾಡದೆ ಹಳೆ ವಾಹನಗಳನ್ನು ಈ ರೀತಿ ಬಿಟ್ಟಿರುವುದು ನಿಜಕ್ಕೂ ನಿರ್ಲಕ್ಷ್ಯ ಧೋರಣೆಯಲ್ಲದೇ ಬೇರೇನಲ್ಲ.
ಇನ್ನಾದರೂ ಪಾಲಿಕೆ ಅಧಿಕಾರಿಗಳು ಹೀಗೆ ನಶಿಸಿ ಹೋಗುತ್ತಿರುವ ವಾಹನಗಳ ವಿಲೇವಾರಿ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಿ ಆಸ್ತಿಯ ರಕ್ಷಣೆಗೆ ಮುಂದಾಗಬೇಕಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…