ಮೈಸೂರು

ಸ್ವದೇಶ್ ದರ್ಶನ್ ಯೋಜನೆಯಡಿ ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಎರಡನೇ ಹಂತದ ಡಿಪಿಆರ್

ಮೈಸೂರು ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲು ಜಿಲ್ಲಾಧಿಕಾರಿಗಳ ಸೂಚನೆ

ಮೈಸೂರು: ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು, ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.

ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು, ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ, ಸ್ಥಳೀಯ ಪ್ರವಾಸೋದ್ಯಮ ಸಕ್ರ್ಯೂಟ್‌ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿಗಳಾದ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕೆ.ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago