Mysore
19
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

ಮೈಸೂರು-ಚೆನ್ನೈ ನಡುವೆ ಸಂಚರಿಸಲಿದೆ ಎರಡನೇ ವಂದೇ ಭಾರತ್‌ ರೈಲು

ಮೈಸೂರು: ಮೈಸೂರು-ಚನ್ನೈ ನಡುವಿನ ಎರಡನೇ ವಂದೇ ಭಾರತ್‌ ರೈಲು ಶ್ರೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ.

ಈ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮೂರು ನಗರಗಳ ಮೂಲಕ ಸಂಚಾರ ಮಾಡಲಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್‌ 12 ರಂದು ಚಾಲನೆ ನೀಡಲಿದ್ದಾರೆ.

ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿದಿನ ಈ ರೈಲು ಸೇವೆ ಇರಲಿದೆ.

ನೂತನ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಂಡ್ಯ, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್​ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಮತ್ತು ಕಟಪಾಡಿಯಲ್ಲಿ ನಿಲುಗಡೆ ಹೊಂದಿದೆ.

ಚೆನ್ನೈನಿಂದ ಹಿಂದಿರುಗುವಾಗ, ರೈಲು ಸಂಖ್ಯೆ 20664 ಚೆನ್ನೈನಿಂದ ಸಂಜೆ 5 ಗಂಟೆಗೆ ಹೊರಟು ಪ್ರತಿದಿನ ರಾತ್ರಿ 11.20 ಕ್ಕೆ ಮೈಸೂರು ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿ ದಿನ ಈ ರೈಲು ಸಂಚಾರ ಇರಲಿದೆ. ಇದು ಕಟಪಾಡಿ, ಕೃಷ್ಣರಾಜಪುರಂ, ಎಸ್‌ಎಂವಿಟಿ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಈ ವರ್ಷ ಮಾರ್ಚ್​ 8 ರಂದು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಪ್ರತಾಪ್ ಸಿಂಹ, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗಳನ್ನು ಮೈಸೂರಿನಿಂದಲೇ ನೇರವಾಗಿ ಪ್ರಾರಂಭಿಸುವಂತೆ ಒತ್ತಾಯಿಸಿದ್ದರು.

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ನೀಡಿದ ಮಾಹಿತಿ ಪ್ರಕಾರ, ಬೆಂಗಳೂರು ಮತ್ತು ಚೆನ್ನೈ ನಡುವೆ ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್ ಸೇವೆಯು ಏಪ್ರಿಲ್ 5 ರಿಂದ ಆರಂಭವಾಗಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!