ಮೈಸೂರು: ಮೈಸೂರು-ಚನ್ನೈ ನಡುವಿನ ಎರಡನೇ ವಂದೇ ಭಾರತ್ ರೈಲು ಶ್ರೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ.
ಈ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮೂರು ನಗರಗಳ ಮೂಲಕ ಸಂಚಾರ ಮಾಡಲಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್ 12 ರಂದು ಚಾಲನೆ ನೀಡಲಿದ್ದಾರೆ.
ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿದಿನ ಈ ರೈಲು ಸೇವೆ ಇರಲಿದೆ.
ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಡ್ಯ, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಮತ್ತು ಕಟಪಾಡಿಯಲ್ಲಿ ನಿಲುಗಡೆ ಹೊಂದಿದೆ.
ಚೆನ್ನೈನಿಂದ ಹಿಂದಿರುಗುವಾಗ, ರೈಲು ಸಂಖ್ಯೆ 20664 ಚೆನ್ನೈನಿಂದ ಸಂಜೆ 5 ಗಂಟೆಗೆ ಹೊರಟು ಪ್ರತಿದಿನ ರಾತ್ರಿ 11.20 ಕ್ಕೆ ಮೈಸೂರು ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿ ದಿನ ಈ ರೈಲು ಸಂಚಾರ ಇರಲಿದೆ. ಇದು ಕಟಪಾಡಿ, ಕೃಷ್ಣರಾಜಪುರಂ, ಎಸ್ಎಂವಿಟಿ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಈ ವರ್ಷ ಮಾರ್ಚ್ 8 ರಂದು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಪ್ರತಾಪ್ ಸಿಂಹ, ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಗಳನ್ನು ಮೈಸೂರಿನಿಂದಲೇ ನೇರವಾಗಿ ಪ್ರಾರಂಭಿಸುವಂತೆ ಒತ್ತಾಯಿಸಿದ್ದರು.
ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ನೀಡಿದ ಮಾಹಿತಿ ಪ್ರಕಾರ, ಬೆಂಗಳೂರು ಮತ್ತು ಚೆನ್ನೈ ನಡುವೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯು ಏಪ್ರಿಲ್ 5 ರಿಂದ ಆರಂಭವಾಗಲಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…