ಮೈಸೂರು: ಮೈಸೂರು-ಚನ್ನೈ ನಡುವಿನ ಎರಡನೇ ವಂದೇ ಭಾರತ್ ರೈಲು ಶ್ರೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ.
ಈ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮೂರು ನಗರಗಳ ಮೂಲಕ ಸಂಚಾರ ಮಾಡಲಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್ 12 ರಂದು ಚಾಲನೆ ನೀಡಲಿದ್ದಾರೆ.
ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿದಿನ ಈ ರೈಲು ಸೇವೆ ಇರಲಿದೆ.
ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಡ್ಯ, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಮತ್ತು ಕಟಪಾಡಿಯಲ್ಲಿ ನಿಲುಗಡೆ ಹೊಂದಿದೆ.
ಚೆನ್ನೈನಿಂದ ಹಿಂದಿರುಗುವಾಗ, ರೈಲು ಸಂಖ್ಯೆ 20664 ಚೆನ್ನೈನಿಂದ ಸಂಜೆ 5 ಗಂಟೆಗೆ ಹೊರಟು ಪ್ರತಿದಿನ ರಾತ್ರಿ 11.20 ಕ್ಕೆ ಮೈಸೂರು ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿ ದಿನ ಈ ರೈಲು ಸಂಚಾರ ಇರಲಿದೆ. ಇದು ಕಟಪಾಡಿ, ಕೃಷ್ಣರಾಜಪುರಂ, ಎಸ್ಎಂವಿಟಿ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಈ ವರ್ಷ ಮಾರ್ಚ್ 8 ರಂದು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಪ್ರತಾಪ್ ಸಿಂಹ, ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಗಳನ್ನು ಮೈಸೂರಿನಿಂದಲೇ ನೇರವಾಗಿ ಪ್ರಾರಂಭಿಸುವಂತೆ ಒತ್ತಾಯಿಸಿದ್ದರು.
ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ನೀಡಿದ ಮಾಹಿತಿ ಪ್ರಕಾರ, ಬೆಂಗಳೂರು ಮತ್ತು ಚೆನ್ನೈ ನಡುವೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯು ಏಪ್ರಿಲ್ 5 ರಿಂದ ಆರಂಭವಾಗಲಿದೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…