ಅರಣ್ಯ ಸಂಚಾರಿ ಅಧಿಕಾರಿಗಳಿಂದ ದಾಳಿ
ಮೈಸೂರು : ತಿ.ನರಸೀಪುರತಾಲ್ಲೂಕು ವ್ಯಾಪ್ತಿಯ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಅವರ ಮಾಲೀಕತ್ವದ ತೂಗುದೀಪ ಫಾರ್ಮ್ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಂಗೋಲಿಯಾದ ೪ ವಲಸೆ ಹಕ್ಕಿ ‘ಬಾರ್ ಹೆಡೆಡ್ ಗೂಸ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ದರ್ಶನ್, ಪತ್ನಿ ವಿಜಯಲಕ್ಷ್ಮೀ ಹಾಗೂ ಫಾರ್ಮ್ ಹೌಸ್ ವ್ಯವಸ್ಥಾಪಕ ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರೇಡಿಯೋ ಜಾಕಿಯೊಬ್ಬರು ಮಾಡಿದ ವಿಡಿಯೋ ಒಂದರಿಂದ ಈಗ ದರ್ಶನ್ ಗೆ ಸಂಕಷ್ಟ ಎದುರಾಗಿದೆ.
ರೇಡಿಯೋ ಜಾಕಿಯೊಬ್ಬರು ಸಂಕ್ರಾಂತಿ ಹಬ್ಬಕ್ಕೆ ದರ್ಶನ್ ಫಾರ್ಮ್ ಹೌಸ್ನಲ್ಲಿ ಮಾಡಿದ ವಿಡಿಯೋದಿಂದ ಬಾರ್ ಹೆಡೆಡ್ ಗೂಸ್ ಹಕ್ಕಿಗಳು ದರ್ಶನ್ ಫಾರ್ಮ್ ಹೌಸ್ ಪಂಜರದಲ್ಲಿ ಇರುವುದು ಕಂಡು ಬಂದಿತ್ತು. ಈ ಹಕ್ಕಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ ಷೆಡ್ಯೂಲ್-೨ ಅಡಿಯಲ್ಲಿ ಬರುತ್ತವೆ. ಇವು ವಿರಳವಾದ ಪಕ್ಷಿಗಳಾಗಿವೆ. ಈ ಹಕ್ಕಿಗಳು ಹೆಚ್ಚಾಗಿ ಮಧ್ಯ ಏಷ್ಯಾದ ಮಂಗೋಲಿಯಾ, ಕಜಕಿಸ್ತಾನ, ಟಿಬೆಟ್ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಆ ಪ್ರದೇಶದಲ್ಲಿ ಶೀತ ಹೆಚ್ಚಾದಾಗ ರಕ್ಷಣೆಗೋಸ್ಕರ ಹಿಮಾಲಯ ದಾಟಿ ದಕ್ಷಿಣ ರಾಜ್ಯಗಳಿಗ ಆಗಮಿಸುತ್ತವೆ. ಇವುಗಳನ್ನು ಸೆರೆ ಹಿಡಿದು ಸಾಕುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಿರುವ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ತಿಳಿಸಿದ್ದಾರೆ.
ದರ್ಶನ್ ಫಾರ್ಮ್ ಹೌಸ್ ವಲಸೆ ಹಕ್ಕಿಗಳು ಇರುವ ಖಚಿತ ಮಾಹಿತಿ ನಮಗೆ ದೊರೆತಿತ್ತು. ಅಲ್ಲದೆ, ಸಾಮಾಜಿಕ ಜಾಲತಾಣ ಮೂಲಕ ಸಹ ಈ ವಿಚಾರ ಗಮನಕ್ಕೆ ಬಂತು. ಹಾಗಾಗಿ, ಶುಕ್ರವಾರ ಸಂಜೆ ಸ್ಥಳಕ್ಕೆ ತೆರಳಿ ಹಕ್ಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಕ್ಕಿಗಳು ದರ್ಶನ್ ಫಾರ್ಮ್ ಹೌಸ್ಗೆ ಹೇಗೆ ಬಂತು? ಅವುಗಳನ್ನು ಅವರಿಗೆ ನೀಡಿದವರು ಯಾರು ಎಂಬ ಕುರಿತು ತನಿಖೆ ನಡೆಸಲಾಗುವುದು ಎಂದು ಆರ್ಎಫ್ಒ ವಿವೇಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…