ಅರಣ್ಯ ಸಂಚಾರಿ ಅಧಿಕಾರಿಗಳಿಂದ ದಾಳಿ
ಮೈಸೂರು : ತಿ.ನರಸೀಪುರತಾಲ್ಲೂಕು ವ್ಯಾಪ್ತಿಯ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಅವರ ಮಾಲೀಕತ್ವದ ತೂಗುದೀಪ ಫಾರ್ಮ್ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಂಗೋಲಿಯಾದ ೪ ವಲಸೆ ಹಕ್ಕಿ ‘ಬಾರ್ ಹೆಡೆಡ್ ಗೂಸ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ದರ್ಶನ್, ಪತ್ನಿ ವಿಜಯಲಕ್ಷ್ಮೀ ಹಾಗೂ ಫಾರ್ಮ್ ಹೌಸ್ ವ್ಯವಸ್ಥಾಪಕ ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರೇಡಿಯೋ ಜಾಕಿಯೊಬ್ಬರು ಮಾಡಿದ ವಿಡಿಯೋ ಒಂದರಿಂದ ಈಗ ದರ್ಶನ್ ಗೆ ಸಂಕಷ್ಟ ಎದುರಾಗಿದೆ.
ರೇಡಿಯೋ ಜಾಕಿಯೊಬ್ಬರು ಸಂಕ್ರಾಂತಿ ಹಬ್ಬಕ್ಕೆ ದರ್ಶನ್ ಫಾರ್ಮ್ ಹೌಸ್ನಲ್ಲಿ ಮಾಡಿದ ವಿಡಿಯೋದಿಂದ ಬಾರ್ ಹೆಡೆಡ್ ಗೂಸ್ ಹಕ್ಕಿಗಳು ದರ್ಶನ್ ಫಾರ್ಮ್ ಹೌಸ್ ಪಂಜರದಲ್ಲಿ ಇರುವುದು ಕಂಡು ಬಂದಿತ್ತು. ಈ ಹಕ್ಕಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ ಷೆಡ್ಯೂಲ್-೨ ಅಡಿಯಲ್ಲಿ ಬರುತ್ತವೆ. ಇವು ವಿರಳವಾದ ಪಕ್ಷಿಗಳಾಗಿವೆ. ಈ ಹಕ್ಕಿಗಳು ಹೆಚ್ಚಾಗಿ ಮಧ್ಯ ಏಷ್ಯಾದ ಮಂಗೋಲಿಯಾ, ಕಜಕಿಸ್ತಾನ, ಟಿಬೆಟ್ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಆ ಪ್ರದೇಶದಲ್ಲಿ ಶೀತ ಹೆಚ್ಚಾದಾಗ ರಕ್ಷಣೆಗೋಸ್ಕರ ಹಿಮಾಲಯ ದಾಟಿ ದಕ್ಷಿಣ ರಾಜ್ಯಗಳಿಗ ಆಗಮಿಸುತ್ತವೆ. ಇವುಗಳನ್ನು ಸೆರೆ ಹಿಡಿದು ಸಾಕುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಿರುವ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ತಿಳಿಸಿದ್ದಾರೆ.
ದರ್ಶನ್ ಫಾರ್ಮ್ ಹೌಸ್ ವಲಸೆ ಹಕ್ಕಿಗಳು ಇರುವ ಖಚಿತ ಮಾಹಿತಿ ನಮಗೆ ದೊರೆತಿತ್ತು. ಅಲ್ಲದೆ, ಸಾಮಾಜಿಕ ಜಾಲತಾಣ ಮೂಲಕ ಸಹ ಈ ವಿಚಾರ ಗಮನಕ್ಕೆ ಬಂತು. ಹಾಗಾಗಿ, ಶುಕ್ರವಾರ ಸಂಜೆ ಸ್ಥಳಕ್ಕೆ ತೆರಳಿ ಹಕ್ಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಕ್ಕಿಗಳು ದರ್ಶನ್ ಫಾರ್ಮ್ ಹೌಸ್ಗೆ ಹೇಗೆ ಬಂತು? ಅವುಗಳನ್ನು ಅವರಿಗೆ ನೀಡಿದವರು ಯಾರು ಎಂಬ ಕುರಿತು ತನಿಖೆ ನಡೆಸಲಾಗುವುದು ಎಂದು ಆರ್ಎಫ್ಒ ವಿವೇಕ್ ತಿಳಿಸಿದ್ದಾರೆ.
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…