ಮೈಸೂರು

ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಸೆಲ್ಫ್‌ ಎಕ್ಸ್ ಪೆಂಡಿಂಗ್‌ ಅಯೋರ್ಟಿಕ್‌ ಕವಾಡ ಅಳವಡಿಕೆ

ಮೈಸೂರು: ಇಲ್ಲಿನ ಜಯದೇವ ಆಸ್ಪತ್ರೆಯ ವೈದ್ಯರ ತಂಡ ಇದೇ ಮೊದಲ ಬಾರಿಗೆ ರೋಗಿಯೊಬ್ಬರಿಗೆ ಹೃದಯ ಶಸ್ತ್ರಚಿಕಿತ್ಸೆ ಇಲ್ಲದೆ ಮೆಟ್ರಾನಿಕ್‌ ಸೆಲ್ಫ್‌ ಎಕ್ಸ್‌ಪೆಂಡಿಂಗ್‌ ಅಯೋರ್ಟಿಕ್‌ ಕವಾಟವನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ.

ಕೊಳ್ಳೇಗಾಲದ ೮೧ ವರ್ಷದ ನಿವೃತ್ತ ಉಪನ್ಯಾಸಕರಾದ ಚನ್ನಮಾದೇಗೌಡ ಅವರಿಗೆ ಡಾ.ಬಿ. ದಿನೇಶ್‌, ಡಾ.ಪ್ರಶಾಂತ್‌ ದ್ವೀವೇದಿ ನೇತೃತ್ವದ ತಂಡ ಯಶಸ್ವಿಯಾಗಿ ಅಯೋರ್ಟಿಕ್‌ ಕವಾಟವನ್ನು ಅಳವಡಿಸಿದೆ. ತಂಡದಲ್ಲಿ ಡಾ.ವೈ.ಎಸ್‌ ಶ್ರೀಮಂತ್‌, ಡಾ.ಜೆ ಸ್ನೇಹಲ್‌, ಡಾ.ಭಾರತಿ, ಡಾ.ನಿಶ್ಚಿತ್‌, ಡಾ. ಮಧುಪ್ರಕಾಶ್‌, ಡಾ.ಚಂದನ್‌, ಡಾ.ಮಿಥುನ್‌, ತಾಂತ್ರಿಕ ಸಿಬ್ಬಂದಿಗಳಾದ ನಾಗರಾಜ್‌, ಸುಮ, ಶಾಂತ ಹಿರಿಯ ಶುಶ್ರೂಷಾಧಿಕಾರಿ ಹರೀಶ್‌ ಕುಮಾರ್‌ ಇದ್ದರು.

ಜಯದೇವ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಯಿಲ್ಲದೆ ಮೆಟ್ರಾನಿಕ್‌ ಸೆಲ್ಫ್‌ ಎಕ್ಸ್‌ಪೆಂಡಿಂಗ್‌ ಅಯೋರ್ಟಿಕ್‌ ಕವಾಟವನ್ನು ಅಳವಡಿಸಲಾಗಿದೆ. ವಯಸ್ಸಾದವರಿಗೆ ಹಾಗೂ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗದವರಿಗೆ ಈ ರೀತಿಯ ಚಿಕಿತ್ಸೆ ಮಾಡಲಾಗುತ್ತದೆ. ತೊಡೆಯ ರಕ್ತನಾಳದ ಮೂಲಕ ಅಯೋರ್ಟಿಕ್‌ ಕವಾಟವನ್ನು ಹೃದಯಕ್ಕೆ ಜೋಡಿಸಲಾಗುತ್ತದೆ. ಈ ಚಿಕಿತ್ಸೆಗಾಗಿ ೧೬ ಲಕ್ಷ ವೆಚ್ಚವಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್‌ ಸದಾನಂದ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago