ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು.
ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ ನವರು ಸ್ವಸಹಾಯ ಸಂಘಗಳಿಗೆ ಸಾಲ ಸಂಯೋಜನೆ ಹಾಗೂ ಬೃಹತ್ ಸಾಲ ವಿತರಣೆ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳೆಯರು ಸಾಲ ಪಡೆದು ಹಬ್ಬ, ಬೀಗರ ಊಟಕ್ಕೆ ಹಣ ಬಳಸಬೇಡಿ ಸರ್ಕಾರ ಮತ್ತು ಬ್ಯಾಂಕ್ ನವರು ಒಳ್ಳೆಯ ಉದ್ದೇಶದಿಂದ ಸಾಲ ನೀಡುತ್ತಿದ್ದಾರೆ ಇದನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಿ ಎಂದು ತಿಳಿಸಿದರು.
ನಗರ ಸಭೆ ಪೌರಾಯುಕ್ತೆ ಎಂ. ಮಾನಸ ಮಾತನಾಡಿ, ಹೆಣ್ಣು ಮಕ್ಕಳು ಸಾಲ ಪಡೆದ ಹಣವನ್ನು ಮಕ್ಕಳ ಶಿಕ್ಷಣ ಹಾಗೂ ವ್ಯಾಪಾರ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಬೇಕು ವೈಭೋಗದ ಜೀವನ ನಡೆಸಲು ಸಾಲ ಪಡೆಯಬೇಡಿ ಸಾಲ ತೀರಿಸಲು ಹೊರೆಯಾಗುತ್ತದೆ ಸಮಾಜದಲ್ಲಿ ಬಡವರಾಗಿ ಹುಟ್ಟೋದು ತಪ್ಪಲ್ಲ ಆದರೆ ನಾವು ಬಡವರಾಗಿ ಸಾಯೋದು ತಪ್ಪು ಏಕೆಂದರೆ ಸಾಲ ಪಡೆದ ಹಣವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಮಹಿಳೆಯರ ಮೇಲಿದೆ ಅದನ್ನು ಮರೆತು ಅವಶ್ಯಕತೆ ಇಲ್ಲದ ಕೆಲಸಗಳಿಗೆ ಹಣವನ್ನು ದುಂದು ವೆಚ್ಚ ಮಾಡಿ ಜೀವನವನ್ನು ಕಷ್ಟಕ್ಕೆ ತಳ್ಳಬೇಡಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಮೇಶ್ ಎಂ.ಪಿ, ನಾರಾಯಣ ಹೆಗ್ಗಡೆ ಸೇರಿದಂತೆ ಕೆ ಆರ್ ನಗರ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನ ವಿವಿಧ ಸ್ವಸಹಾಯ ಸಂಘಗಳ ನೂರಾರು ಮಹಿಳೆಯರು ಹಾಗೂ ಕೆನರಾ ಬ್ಯಾಂಕ್ ಗಳ ಸಿಬ್ಬಂದಿ ವರ್ಗದವರು ಇದ್ದರು.
ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…
ಚಿಕ್ಕಬಳ್ಳಾಪುರ: ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೂ 184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ…
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…