ಮೈಸೂರು

ಸ್ವಸಹಾಯ ಸಾಲ: ಹಣವನ್ನು ಸದ್ಬಳಕೆ ಮಾಡಿಕೊಳ್ಳಿ: ಮಂಜುನಾಥ್

ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು.

ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ ನವರು ಸ್ವಸಹಾಯ ಸಂಘಗಳಿಗೆ ಸಾಲ ಸಂಯೋಜನೆ ಹಾಗೂ ಬೃಹತ್ ಸಾಲ ವಿತರಣೆ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳೆಯರು ಸಾಲ ಪಡೆದು ಹಬ್ಬ, ಬೀಗರ ಊಟಕ್ಕೆ ಹಣ ಬಳಸಬೇಡಿ ಸರ್ಕಾರ ಮತ್ತು ಬ್ಯಾಂಕ್ ನವರು ಒಳ್ಳೆಯ ಉದ್ದೇಶದಿಂದ ಸಾಲ ನೀಡುತ್ತಿದ್ದಾರೆ ಇದನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಿ ಎಂದು ತಿಳಿಸಿದರು.

ನಗರ ಸಭೆ ಪೌರಾಯುಕ್ತೆ ಎಂ. ಮಾನಸ ಮಾತನಾಡಿ, ಹೆಣ್ಣು ಮಕ್ಕಳು ಸಾಲ ಪಡೆದ ಹಣವನ್ನು ಮಕ್ಕಳ ಶಿಕ್ಷಣ ಹಾಗೂ ವ್ಯಾಪಾರ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಬೇಕು ವೈಭೋಗದ ಜೀವನ ನಡೆಸಲು ಸಾಲ ಪಡೆಯಬೇಡಿ ಸಾಲ ತೀರಿಸಲು ಹೊರೆಯಾಗುತ್ತದೆ ಸಮಾಜದಲ್ಲಿ ಬಡವರಾಗಿ ಹುಟ್ಟೋದು ತಪ್ಪಲ್ಲ ಆದರೆ ನಾವು ಬಡವರಾಗಿ ಸಾಯೋದು ತಪ್ಪು ಏಕೆಂದರೆ ಸಾಲ ಪಡೆದ ಹಣವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಮಹಿಳೆಯರ ಮೇಲಿದೆ ಅದನ್ನು ಮರೆತು ಅವಶ್ಯಕತೆ ಇಲ್ಲದ ಕೆಲಸಗಳಿಗೆ ಹಣವನ್ನು ದುಂದು ವೆಚ್ಚ ಮಾಡಿ ಜೀವನವನ್ನು ಕಷ್ಟಕ್ಕೆ ತಳ್ಳಬೇಡಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಮೇಶ್ ಎಂ.ಪಿ, ನಾರಾಯಣ ಹೆಗ್ಗಡೆ ಸೇರಿದಂತೆ ಕೆ ಆರ್ ನಗರ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನ ವಿವಿಧ ಸ್ವಸಹಾಯ ಸಂಘಗಳ ನೂರಾರು ಮಹಿಳೆಯರು ಹಾಗೂ ಕೆನರಾ ಬ್ಯಾಂಕ್ ಗಳ ಸಿಬ್ಬಂದಿ ವರ್ಗದವರು  ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

10 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

17 hours ago