ಮೈಸೂರು

ಸ್ವಸಹಾಯ ಸಾಲ: ಹಣವನ್ನು ಸದ್ಬಳಕೆ ಮಾಡಿಕೊಳ್ಳಿ: ಮಂಜುನಾಥ್

ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು.

ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ ನವರು ಸ್ವಸಹಾಯ ಸಂಘಗಳಿಗೆ ಸಾಲ ಸಂಯೋಜನೆ ಹಾಗೂ ಬೃಹತ್ ಸಾಲ ವಿತರಣೆ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳೆಯರು ಸಾಲ ಪಡೆದು ಹಬ್ಬ, ಬೀಗರ ಊಟಕ್ಕೆ ಹಣ ಬಳಸಬೇಡಿ ಸರ್ಕಾರ ಮತ್ತು ಬ್ಯಾಂಕ್ ನವರು ಒಳ್ಳೆಯ ಉದ್ದೇಶದಿಂದ ಸಾಲ ನೀಡುತ್ತಿದ್ದಾರೆ ಇದನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸಿ ಎಂದು ತಿಳಿಸಿದರು.

ನಗರ ಸಭೆ ಪೌರಾಯುಕ್ತೆ ಎಂ. ಮಾನಸ ಮಾತನಾಡಿ, ಹೆಣ್ಣು ಮಕ್ಕಳು ಸಾಲ ಪಡೆದ ಹಣವನ್ನು ಮಕ್ಕಳ ಶಿಕ್ಷಣ ಹಾಗೂ ವ್ಯಾಪಾರ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಬೇಕು ವೈಭೋಗದ ಜೀವನ ನಡೆಸಲು ಸಾಲ ಪಡೆಯಬೇಡಿ ಸಾಲ ತೀರಿಸಲು ಹೊರೆಯಾಗುತ್ತದೆ ಸಮಾಜದಲ್ಲಿ ಬಡವರಾಗಿ ಹುಟ್ಟೋದು ತಪ್ಪಲ್ಲ ಆದರೆ ನಾವು ಬಡವರಾಗಿ ಸಾಯೋದು ತಪ್ಪು ಏಕೆಂದರೆ ಸಾಲ ಪಡೆದ ಹಣವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಮಹಿಳೆಯರ ಮೇಲಿದೆ ಅದನ್ನು ಮರೆತು ಅವಶ್ಯಕತೆ ಇಲ್ಲದ ಕೆಲಸಗಳಿಗೆ ಹಣವನ್ನು ದುಂದು ವೆಚ್ಚ ಮಾಡಿ ಜೀವನವನ್ನು ಕಷ್ಟಕ್ಕೆ ತಳ್ಳಬೇಡಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಮೇಶ್ ಎಂ.ಪಿ, ನಾರಾಯಣ ಹೆಗ್ಗಡೆ ಸೇರಿದಂತೆ ಕೆ ಆರ್ ನಗರ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನ ವಿವಿಧ ಸ್ವಸಹಾಯ ಸಂಘಗಳ ನೂರಾರು ಮಹಿಳೆಯರು ಹಾಗೂ ಕೆನರಾ ಬ್ಯಾಂಕ್ ಗಳ ಸಿಬ್ಬಂದಿ ವರ್ಗದವರು  ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago