ಮೈಸೂರು: ನಿಗದಿತ ಬೆಲೆಗಿಂತ ೬೦ ರೂ. ಹೆಚ್ಚುವರಿ ದರಕ್ಕೆ ಅಡುಗೆ ಎಣ್ಣೆ ಮಾರಾಟ ಮಾಡಿದ ಎಸ್ಎಸ್ಜಿ ಸೂಪರ್ ಮಾರ್ಕೆಟ್ ವಿರುದ್ಧ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.
ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿಯ ಬಳಿ ಇರುವ ಎಸ್ಎಸ್ಜಿ ಸೂಪರ್ ಮಾರ್ಕೆಟ್ನಲ್ಲಿ ಸನ್ ಪ್ಯೂರ್ ಅಡುಗೆ ಎಣ್ಣೆಯನ್ನು ಮುಖಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ ಎಂದು ಗ್ರಾಮದ ಯುವಕ ಎಂ. ಸುರೇಶ್ ಎಂಬವರು ಗ್ರಾಹಕರ ರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.
ಅ. ೧೯ರಂದು ಸುರೇಶ್ ಅವರು ಎಸ್ಎಸ್ಜಿ ಸೂಪರ್ ಮಾರ್ಕೆಟ್ನಲ್ಲಿ ೪ ಲೀಟರ್ ಅಡುಗೆ ಎಣ್ಣೆ ಖರೀದಿಸಿದ್ದಾರೆ. ಅಂಗಡಿ ಮಾಲೀಕ ಪ್ರತಿ ಲೀಟರಿಗೆ ೧೪೫ ರೂ. ನಂತೆ ೪ ಲೀಟರ್ಗೆ ೫೮೦ ರೂ. ಗಳನ್ನು ಪಾವತಿಸುವಂತೆ ಹೇಳಿದ್ದಾರೆ. ಆದರೆ, ಒಂದು ಲೀಟರ್ ಅಡುಗೆ ಎಣ್ಣೆಗೆ ೧೩೦ ರೂ. ಮುಖಬೆಲೆ ಇದ್ದು, ಅದರಂತೆ ಮಾರಾಟ ಮಾಡದೆ ಹೆಚ್ಚಿನ ದರಕ್ಕೆ ಏಕೆ ಮಾರಾಟ ಮಾಡುತ್ತಿದ್ದೀರಿ ಎಂದು ಸುರೇಶ್ ಪ್ರಶ್ನಿಸಿದ್ದಾರೆ.
ಇಷ್ಟವಿದ್ದರೆ ತೆಗೆದುಕೊಳ್ಳಿ, ನಾನು ಮಾರಾಟ ಮಾಡುವುದು ಇದೇ ಬೆಲೆಗೆ, ಊರಿನವರೆಲ್ಲರೂ ಇಷ್ಟೇ ಬೆಲೆ ಕೊಟ್ಟು ತೆಗೆದುಕೊಳ್ಳುವುದು ಎಂದು ಗದರುವುದರ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಮಾನಸಿಕ ಹಾಗೂ ಆರ್ಥಿಕ ನಷ್ಟ ಅನುಭವಿಸಿದ ಸುರೇಶ್ ಗ್ರಾಹಕರಿಗೆ ಮೋಸ ಮಾಡಿದ ಆರೋಪದಡಿ ದೂರು ದಾಖಲಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…
೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…
ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…