ಮೈಸೂರು: ನಿಗದಿತ ಬೆಲೆಗಿಂತ ೬೦ ರೂ. ಹೆಚ್ಚುವರಿ ದರಕ್ಕೆ ಅಡುಗೆ ಎಣ್ಣೆ ಮಾರಾಟ ಮಾಡಿದ ಎಸ್ಎಸ್ಜಿ ಸೂಪರ್ ಮಾರ್ಕೆಟ್ ವಿರುದ್ಧ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.
ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿಯ ಬಳಿ ಇರುವ ಎಸ್ಎಸ್ಜಿ ಸೂಪರ್ ಮಾರ್ಕೆಟ್ನಲ್ಲಿ ಸನ್ ಪ್ಯೂರ್ ಅಡುಗೆ ಎಣ್ಣೆಯನ್ನು ಮುಖಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ ಎಂದು ಗ್ರಾಮದ ಯುವಕ ಎಂ. ಸುರೇಶ್ ಎಂಬವರು ಗ್ರಾಹಕರ ರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.
ಅ. ೧೯ರಂದು ಸುರೇಶ್ ಅವರು ಎಸ್ಎಸ್ಜಿ ಸೂಪರ್ ಮಾರ್ಕೆಟ್ನಲ್ಲಿ ೪ ಲೀಟರ್ ಅಡುಗೆ ಎಣ್ಣೆ ಖರೀದಿಸಿದ್ದಾರೆ. ಅಂಗಡಿ ಮಾಲೀಕ ಪ್ರತಿ ಲೀಟರಿಗೆ ೧೪೫ ರೂ. ನಂತೆ ೪ ಲೀಟರ್ಗೆ ೫೮೦ ರೂ. ಗಳನ್ನು ಪಾವತಿಸುವಂತೆ ಹೇಳಿದ್ದಾರೆ. ಆದರೆ, ಒಂದು ಲೀಟರ್ ಅಡುಗೆ ಎಣ್ಣೆಗೆ ೧೩೦ ರೂ. ಮುಖಬೆಲೆ ಇದ್ದು, ಅದರಂತೆ ಮಾರಾಟ ಮಾಡದೆ ಹೆಚ್ಚಿನ ದರಕ್ಕೆ ಏಕೆ ಮಾರಾಟ ಮಾಡುತ್ತಿದ್ದೀರಿ ಎಂದು ಸುರೇಶ್ ಪ್ರಶ್ನಿಸಿದ್ದಾರೆ.
ಇಷ್ಟವಿದ್ದರೆ ತೆಗೆದುಕೊಳ್ಳಿ, ನಾನು ಮಾರಾಟ ಮಾಡುವುದು ಇದೇ ಬೆಲೆಗೆ, ಊರಿನವರೆಲ್ಲರೂ ಇಷ್ಟೇ ಬೆಲೆ ಕೊಟ್ಟು ತೆಗೆದುಕೊಳ್ಳುವುದು ಎಂದು ಗದರುವುದರ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಮಾನಸಿಕ ಹಾಗೂ ಆರ್ಥಿಕ ನಷ್ಟ ಅನುಭವಿಸಿದ ಸುರೇಶ್ ಗ್ರಾಹಕರಿಗೆ ಮೋಸ ಮಾಡಿದ ಆರೋಪದಡಿ ದೂರು ದಾಖಲಿಸಿದ್ದಾರೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…