ಮೈಸೂರು

ರಸ್ತೆಯಲ್ಲಿ ನಿಂತು ಕುರಿ ದನಗಳ ಮಾರಾಟ : ವಾಹನ ಸಂಚಾರ ಅಸ್ತವ್ಯಸ್ಥ

ನಂಜನಗೂಡು : ಮೈಸೂರು ಚಾಮರಾಜನಗರ ಬೈಪಾಸ್ ರಸ್ತೆಯ ಮಧ್ಯದಲ್ಲಿ ಕುರಿ ಮತ್ತು ದನಗಳ ವ್ಯಾಪಾರ ಮಾಡುವುದು ನಡೆಯುತ್ತವೆ.

ಪ್ರತಿ ಶುಕ್ರವಾರ ನಡೆಯುವ ದನದ ವ್ಯಾಪಾರ ಮತ್ತು ಕುರಿ ವ್ಯಾಪಾರ ಸಂತೆ ರದ್ದಾಗಿದೆ ಕಾರಣ ಹಸುಗಳಿಗೆ ಗಂಟು ರೋಗ ಬರುತ್ತಿರುವ ಹಿನ್ನೆಲೆಯಲ್ಲಿ ಸಂತೆ ರದ್ದು ಮಾಡಲಾಗಿದೆ.
ಆದರೆ ನಿಗದಿತ ಸ್ಥಳದಲ್ಲಿ ವ್ಯಾಪಾರ ಇಲ್ಲದ ಕಾರಣ ಗ್ರಾಮಾಂತರಗಳಿಂದ ಬರುವ ಹಸುಗಳ ಮತ್ತು ಕುರಿಗಳ ವ್ಯಾಪಾರಸ್ಥರು ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿ ಖಾಲಿ ಇರುವ ಜಾಗದ ಜೊತೆಗೆ ರಸ್ತೆಯ ಅರ್ಧಭಾಗವನ್ನು ಅಕ್ರಮಿಸಿಕೊಂಡು ರಸ್ತೆಯಲ್ಲಿ ನಿಂತು ಕುರಿಗಳ ವ್ಯಾಪಾರ ದನಗಳ ವ್ಯಾಪಾರ ಮಾಡುತ್ತಿದ್ದಾರೆ.

ಆದರೆ ಮೈಸೂರಿನಿಂದ ಚಾಮರಾಜನಗರ, ನರಸೀಪುರ , ಕೊಳ್ಳೇಗಾಲ, ಹನೂರು, ಕೊಯಮತ್ತೂರು, ಈ ಮಾರ್ಗವಾಗಿ ಹೋಗುವ ಬಸ್ಸುಗಳು,  ಲಾರಿಗಳು, ಪ್ರತಿನಿತ್ಯ ಸಾವಿರಾರು ವಾಹನಗಳು ಬೆಳಗಿನ ಜಾವದಿಂದಲೇ ಓಡಾಡುತ್ತಿರುತ್ತವೆ, ಆದರೆ ದನ  ಮತ್ತು ಕುರಿ ವ್ಯಾಪಾರಸ್ಥರು ಯಾವುದೇ ಭಯಭೀತಿಲ್ಲದೆ ರಸ್ತೆಯ ಮಧ್ಯದಲ್ಲಿ ನಿಂತು ಪರಿಜ್ಞಾನವಿಲ್ಲದೇ ವ್ಯಾಪಾರ ಮಾಡುತ್ತಿರುತ್ತಾರೆ. ಏನಾದರೂ ಆಯ ತಪ್ಪಿ ಅನಾಹುತ ಉಂಟಾದರೆ ನೂರಾರು ರೈತರು ತಮ್ಮ  ದನ ಕರುಗಳು ಕುರಿಗಳ ಜೊತೆ ಪ್ರಾಣ ಕಳೆದುಕೊಳ್ಳುವ ಸಂಭವ ನಿರ್ಮಾಣ ಆಗುತ್ತದೆ.

ದ್ವಿಚಕ್ರ ವಾಹನಗಳು ಲಾರಿಗಳು ಬಸ್ಸುಗಳು ಎಷ್ಟೇ ಶಬ್ಧ  ಮಾಡಿದರು ಕೂಡ ರಸ್ತೆಯನ್ನು ಬಿಟ್ಟು ಜಗ್ಗುವುದಿಲ್ಲ, ವಾಹನ ಚಾಲಕರೇ ಆದಷ್ಟು ನಿಧಾನಗತಿಯಲ್ಲಿ ರಸ್ತೆದಾಟು ಪರಿಸ್ಥಿತಿ ಉಂಟಾಗಿದೆ. ಹೆಚ್ಚಿನ ಅನಾಹುತ ಉಂಟಾಗುವ ಮೊದಲು ಸಂಬಂಧಪಟ್ಟವರು ರಸ್ತೆಯಲ್ಲಿ ವ್ಯಾಪಾರ ಮಾಡುವ ಕುರಿ ಮತ್ತು ದನದ ಸಂತೆಗಳನ್ನು ರದ್ದುಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

andolana

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

2 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

3 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

3 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

4 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

4 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

5 hours ago