ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ.
ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ ಅರಮನೆಯಲ್ಲಿ ರಾಜಕುಮಾರಿ ಗಾಯಿತ್ರಿದೇವಿ ಅವರ ಸಖಿಯಾಗಿದ್ದರು. ಮೈಸೂರು ಅರಮನೆಯಲ್ಲಿ ವಿಶೇಷ ಶಿಕ್ಷಣ ಪಡೆದ ಛಾಯಾ ಅವರು, ಮಹಾರಾಣಿ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದರು.
ವಿವಾಹದ ಬಳಿಕ ಮುಂಬೈನಲ್ಲಿ ನೆಲಿಸಿದ್ದ ಅವರು, ಬಾಂಬೆ ಆಕಾಶವಾಣಿ ಹಾಗೂ ಹಲವು ಮ್ಯಾಗಝಿನ್ಗಳಿಗೆ 80ರ ದಶಕದ ಪ್ರಸಿದ್ಧ ಸಿನಿಮಾ ತಾರೆಯರ ಸಂದರ್ಶನ ಮಾಡಿದ್ದರು.
ಮುಂಬೈನ ತಾಜ್ ಹೋಟೆಲ್ನ ʻಇನ್ಹೌಸ್ ಜರ್ನರ್ʼ ಪತ್ರಿಕೆಯ ಸಂಪಾದಕರಾಗಿದ್ದು. ಡೆಕ್ಕನ್ ಹೆರಾಲ್ಡ್ನಲ್ಲಿ ಅವರ ಅಂಕಣ ಜನಪ್ರಿಯವಾಗಿತ್ತು. ಬಿಬಿಸಿಯ ಸೀರಿಯಲ್ ಒಂದಕ್ಕೆ ಸ್ಕ್ರಿಪ್ಟ್ ಬರೆದಿದ್ದರು. ಮಾಡೆಲಿಂಗ್ನಲ್ಲಿಯೂ ಹೆಸರು ಗಳಿಸಿದ್ದರು.
ಬೆಂಗಳೂರಿನಲ್ಲಿ ʻಬ್ಲಾಸಂ ಸಿಟಿʼ ಎಂಬ ಮೊದಲ ಸಿಟಿ ಮ್ಯಾಗಝಿನ್ ಆರಂಭಿಸಿದ್ದರು. ಇವರು ಪ್ರತಿದ್ಧ ಬರಹಗಾರರು ಕೂಡ ಆಗಿದ್ದರು. ಮುಂಬೈನ ಕಾಲೇಜು ಒಂದರಲ್ಲಿ ಪತ್ರಿಕೋದ್ಯಮದ ಪ್ರಾಧ್ಯಾಪಕರಾಗಿದ್ದರು.
ಪುತ್ರ ಅನಿಲ್ ಶ್ರೀವತ್ಸ, ಅರ್ಜುನ್ ಶ್ರೀವತ್ಸ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…