ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ.
ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ ಅರಮನೆಯಲ್ಲಿ ರಾಜಕುಮಾರಿ ಗಾಯಿತ್ರಿದೇವಿ ಅವರ ಸಖಿಯಾಗಿದ್ದರು. ಮೈಸೂರು ಅರಮನೆಯಲ್ಲಿ ವಿಶೇಷ ಶಿಕ್ಷಣ ಪಡೆದ ಛಾಯಾ ಅವರು, ಮಹಾರಾಣಿ ಕಾಲೇಜಿನಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದರು.
ವಿವಾಹದ ಬಳಿಕ ಮುಂಬೈನಲ್ಲಿ ನೆಲಿಸಿದ್ದ ಅವರು, ಬಾಂಬೆ ಆಕಾಶವಾಣಿ ಹಾಗೂ ಹಲವು ಮ್ಯಾಗಝಿನ್ಗಳಿಗೆ 80ರ ದಶಕದ ಪ್ರಸಿದ್ಧ ಸಿನಿಮಾ ತಾರೆಯರ ಸಂದರ್ಶನ ಮಾಡಿದ್ದರು.
ಮುಂಬೈನ ತಾಜ್ ಹೋಟೆಲ್ನ ʻಇನ್ಹೌಸ್ ಜರ್ನರ್ʼ ಪತ್ರಿಕೆಯ ಸಂಪಾದಕರಾಗಿದ್ದು. ಡೆಕ್ಕನ್ ಹೆರಾಲ್ಡ್ನಲ್ಲಿ ಅವರ ಅಂಕಣ ಜನಪ್ರಿಯವಾಗಿತ್ತು. ಬಿಬಿಸಿಯ ಸೀರಿಯಲ್ ಒಂದಕ್ಕೆ ಸ್ಕ್ರಿಪ್ಟ್ ಬರೆದಿದ್ದರು. ಮಾಡೆಲಿಂಗ್ನಲ್ಲಿಯೂ ಹೆಸರು ಗಳಿಸಿದ್ದರು.
ಬೆಂಗಳೂರಿನಲ್ಲಿ ʻಬ್ಲಾಸಂ ಸಿಟಿʼ ಎಂಬ ಮೊದಲ ಸಿಟಿ ಮ್ಯಾಗಝಿನ್ ಆರಂಭಿಸಿದ್ದರು. ಇವರು ಪ್ರತಿದ್ಧ ಬರಹಗಾರರು ಕೂಡ ಆಗಿದ್ದರು. ಮುಂಬೈನ ಕಾಲೇಜು ಒಂದರಲ್ಲಿ ಪತ್ರಿಕೋದ್ಯಮದ ಪ್ರಾಧ್ಯಾಪಕರಾಗಿದ್ದರು.
ಪುತ್ರ ಅನಿಲ್ ಶ್ರೀವತ್ಸ, ಅರ್ಜುನ್ ಶ್ರೀವತ್ಸ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…