accident case Two dead
ಹುಣಸೂರು: ನಗರದ ಬೈಪಾಸ್ ರಸ್ತೆಯ ಕಲ್ಕುಣಿಕೆ ವೃತ್ತದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರಿನಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಜೀಪ್ ಕಲ್ಕುಣಿಕೆ ವೃತ್ತದ ಬಳಿ ನಡೆದು ಕೊಂಡು ಹೋಗುತ್ತಿದ್ದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ನಿವಾಸಿ ಪುಟ್ಟೇಗೌಡ (೫೮) ಎಂಬವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ತುಂಬಿಸಿದ್ದ ಕಬ್ಬಿಣದ ರಾಡ್ಗಳು ಪುಟ್ಟೇಗೌಡ ಅವರ ಮೇಲೆ ಬಿದ್ದು, ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣ: ಬುಧವಾರ ರಾತ್ರಿ ಶುಂಠಿ ತುಂಬಿಸಿಕೊಂಡು ತೆರಳುತ್ತಿದ್ದ ಜೀಪ್ ಚಾಲಕನ ಹತೋಟಿ ತಪ್ಪಿ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಲ್ಕುಣಿಕೆ ನಿವಾಸಿ ಶಿವರಾಜು (೨೨) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…