accident case Two dead
ಹುಣಸೂರು: ನಗರದ ಬೈಪಾಸ್ ರಸ್ತೆಯ ಕಲ್ಕುಣಿಕೆ ವೃತ್ತದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರಿನಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಜೀಪ್ ಕಲ್ಕುಣಿಕೆ ವೃತ್ತದ ಬಳಿ ನಡೆದು ಕೊಂಡು ಹೋಗುತ್ತಿದ್ದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ನಿವಾಸಿ ಪುಟ್ಟೇಗೌಡ (೫೮) ಎಂಬವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ತುಂಬಿಸಿದ್ದ ಕಬ್ಬಿಣದ ರಾಡ್ಗಳು ಪುಟ್ಟೇಗೌಡ ಅವರ ಮೇಲೆ ಬಿದ್ದು, ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣ: ಬುಧವಾರ ರಾತ್ರಿ ಶುಂಠಿ ತುಂಬಿಸಿಕೊಂಡು ತೆರಳುತ್ತಿದ್ದ ಜೀಪ್ ಚಾಲಕನ ಹತೋಟಿ ತಪ್ಪಿ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಲ್ಕುಣಿಕೆ ನಿವಾಸಿ ಶಿವರಾಜು (೨೨) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…