ಮೈಸೂರು

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ.

ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸಣ್ಣೇಗೌಡರ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 130 ಗ್ರಾಂ ಚಿನ್ನಾಭರಣ ಹಾಗೂ ೫ ಸಾವಿರ ರೂ. ನಗದನ್ನು ದೋಚಿದ್ದಾರೆ.

ಸಣ್ಣೇಗೌಡರು ಶನಿವಾರ ತಮ್ಮ ಸೊಸೆಯನ್ನು ಹೆರಿಗೆಗಾಗಿ ಪಿರಿಯಾಪಟ್ಟಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ವೇಳೆ ಮನೆಯಲ್ಲಿ ಕಳ್ಳತನವಾಗಿದೆ.

ಹುಣಸೂರು ನಗರದ ಬನ್ನಿ ಬೀದಿಯಲ್ಲಿರುವ ಶ್ರೀ ಬಂಡಿ ಮಹಾ ಕಾಳಿಯಮ್ಮನ ದೇವಸ್ಥಾನದಲ್ಲಿ ದೇವರ ವಿಗ್ರಹದಲ್ಲಿದ್ದ ಚಿನ್ನಾಭರಣಗಳು ಮತ್ತು ದೇವಸ್ಥಾನದಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯನ್ನು ಕೂಡ ಹೊತ್ತೊಯ್ದಿದ್ದಾರೆ.

ಅದೇ ದಿನ ರಾತ್ರಿ ನಗರದ ನಡು ಬೀದಿಯಲ್ಲಿರುವ ಕೋಲು ನೂರು ಮಾರಿಯಮ್ಮನ ದೇವಸ್ಥಾನದಲ್ಲೂ ದೇವರ ಮೇಲೆ ಇದ್ದ ತಾಳಿ ಮತ್ತು ಗೋಲಕ ಹುಂಡಿಯನ್ನು ದೋಚಿದ್ದಾರೆ.

ಈ ಬಗ್ಗೆ ನಗರ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಿರ್ಲೆ-ಭೇರ್ಯ-ಕೊಡಿಯಾಲ ರಸ್ತೆ ಅಭಿವೃದ್ಧಿ ಯಾವಾಗ?

ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…

2 seconds ago

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

23 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

23 hours ago