ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ.
ಹನಗೋಡು ಹೋಬಳಿಯ ಕಡೇಮನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸಣ್ಣೇಗೌಡರ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 130 ಗ್ರಾಂ ಚಿನ್ನಾಭರಣ ಹಾಗೂ ೫ ಸಾವಿರ ರೂ. ನಗದನ್ನು ದೋಚಿದ್ದಾರೆ.
ಸಣ್ಣೇಗೌಡರು ಶನಿವಾರ ತಮ್ಮ ಸೊಸೆಯನ್ನು ಹೆರಿಗೆಗಾಗಿ ಪಿರಿಯಾಪಟ್ಟಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ವೇಳೆ ಮನೆಯಲ್ಲಿ ಕಳ್ಳತನವಾಗಿದೆ.
ಹುಣಸೂರು ನಗರದ ಬನ್ನಿ ಬೀದಿಯಲ್ಲಿರುವ ಶ್ರೀ ಬಂಡಿ ಮಹಾ ಕಾಳಿಯಮ್ಮನ ದೇವಸ್ಥಾನದಲ್ಲಿ ದೇವರ ವಿಗ್ರಹದಲ್ಲಿದ್ದ ಚಿನ್ನಾಭರಣಗಳು ಮತ್ತು ದೇವಸ್ಥಾನದಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯನ್ನು ಕೂಡ ಹೊತ್ತೊಯ್ದಿದ್ದಾರೆ.
ಅದೇ ದಿನ ರಾತ್ರಿ ನಗರದ ನಡು ಬೀದಿಯಲ್ಲಿರುವ ಕೋಲು ನೂರು ಮಾರಿಯಮ್ಮನ ದೇವಸ್ಥಾನದಲ್ಲೂ ದೇವರ ಮೇಲೆ ಇದ್ದ ತಾಳಿ ಮತ್ತು ಗೋಲಕ ಹುಂಡಿಯನ್ನು ದೋಚಿದ್ದಾರೆ.
ಈ ಬಗ್ಗೆ ನಗರ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…