ಮೈಸೂರು

ಮಹಿಳೆಯರಿಗಾಗಿ ಪ್ರತ್ಯೇಕ ಮಾರುಕಟ್ಟೆ ಕೇಂದ್ರ: ಶಾಸಕ ರಾಮದಾಸ್

ಮೈಸೂರು: ಮಹಿಳೆಯರಿಗಾಗಿ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಬೆಂಬಲ ನೀಡಲಾಗುತ್ತಿದೆ. ಹೊಸದಾಗಿ ನಿರ್ಮಾಣಗೊಂಡ ಈ ಮಾರುಕಟ್ಟೆ ಕೇಂದ್ರ, ಮಾರ್ಚ್ 28ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 62ನೇ ವಾರ್ಡಿನ ವಿದ್ಯಾರಣ್ಯಪುರಂ ಬಡಾವಣೆಯಲ್ಲಿಆಯೋಜಿಸಿದ್ದ ‘ಯೋಗಕ್ಷೇಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡುವ ನಿಟ್ಟಿನಲ್ಲಿ9 ಕೋಟಿ ರೂ. ವೆಚ್ಚದಲ್ಲಿಬಲ್ಲಾಳ್ ವೃತ್ತದಲ್ಲಿಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಾರ್ಚ್ 28ರಂದು ಉದ್ಘಾಟನೆಯಾಗುತ್ತಿದೆ. ಇದರೊಂದಿಗೆ ಇಂದಿನ ತಲೆಮಾರಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿಸರಸ್ವತಿಪುರಂ ಬಡಾವಣೆಯಲ್ಲಿ4 ಕೋಟಿ ರೂ. ವೆಚ್ಚದಲ್ಲಿದೊಡ್ಡ ಗ್ರಂಥಾಲಯ ಸ್ಥಾಪನೆ ಆಗುತ್ತಿದ್ದು, ಅದಕ್ಕೂ ಸದ್ಯದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು,ಎಂದರು.

ಪ್ರಾಣಿಗಳಿಗೆ ಪುನರ್ವಸತಿ ಕೇಂದ್ರ : ಮನುಷ್ಯರಿಗೆ ಮಾತ್ರವಲ್ಲ ಬೀದಿ ನಾಯಿಗಳು ಹಾಗೂ ಕೋತಿಗಳು ಕೂಡ ಗೌರವಯುತ ಬದುಕು ಸಾಗಿಸಬೇಕೆನ್ನುವ ಆಶಯದಿಂದ ಅವುಗಳಿಗಾಗಿ ಸುಸಜ್ಜಿತವಾದ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ ಮಾರ್ಚ್ 25ರಂದು ನಾಯಿಗಳ ಪುನರ್ವಸತಿ ಕೇಂದ್ರ ಲೋಕಾರ್ಪಣೆ ಆಗಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡರು.ಕ್ಷೇತ್ರದಲ್ಲಿರುವ ತುಳಸೀದಾಸ್ ದಾಸಪ್ಪ ಆಸ್ಪತ್ರೆ ಹಾಗೂ ಜಯನಗರ ಆಸ್ಪತ್ರೆ ಖಾಸಗಿ ಆಸ್ಪತ್ರೆಗೆ ಸರಿಸಾಟಿಯಾಗಿ ನಿರ್ಮಿಸಲಾಗಿದೆ. ನಿರೀಕ್ಷೆ ಮೀರಿದ ಸೇವೆ ದೊರೆಯುತ್ತಿದೆ. ಪರಿಣಾಮ, ಜಯನಗರ ಆಸ್ಪತ್ರೆಗೆ ಕೇಂದ್ರ ಸರಕಾರದಿಂದ 36 ಲಕ್ಷ ರೂ. ಬಹುಮಾನ ಬಂದಿದೆ. ಅದು ಒಂದು ದಾಖಲೆಯಾಗಿದೆ ಎಂದರು.

ನಂಬರ್‌ ಒನ್‌ ಕ್ಷೇತ್ರ : ಅಂದುಕೊಂಡಂತೆ ಕಳೆದ ಐದು ವರ್ಷಗಳಲ್ಲಿಗರಿಷ್ಠ ಪ್ರಮಾಣದ ಕಾರ್ಯಯೋಜನೆ ರೂಪಿಸಿ ಅನುಷ್ಠಾನ ಮಾಡುವ ಮೂಲಕ ರಾಜ್ಯದಲ್ಲಿಯೇ ನಂಬರ್ ಒನ್ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿಮ್ಮೆಲ್ಲರ ವಿಶ್ವಾಸ, ಪ್ರೀತಿ, ಸಹಕಾರವೇ ಕಾರಣವಾಗಿದೆ. ಇಡೀ ಕ್ಷೇತ್ರವನ್ನು ಬೋರ್ವೆಲ್ ಮುಕ್ತ ಮಾಡಲಾಗಿದೆ. 482 ಕಿ.ಮೀ. ರಸ್ತೆಯನ್ನು ಸಂಪೂರ್ಣವಾಗಿ ಡಾಂಬರೀಕರಣ ಮಾಡಲಾಗಿದೆ. ರಾಜಕಾಲುವೆ, ಯುಜಿಡಿ, ಮಳೆ ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ ಎಂದರು.1994ರಿಂದ ಈವರೆಗೆ ನಾನು ಕ್ಷೇತ್ರದಲ್ಲಿಹಣ, ಹೆಂಡ ಹಂಚಿಲ್ಲ. ನಿಮ್ಮೆಲ್ಲರ ವಿಶ್ವಾಸದಿಂದ ಆಯ್ಕೆಯಾಗುತ್ತಾ ಬಂದಿದ್ದೇನೆ. ನಿಮ್ಮ ಋುಣ ನನ್ನ ಮೇಲಿದೆ. ಅದನ್ನು ಕಾಯಾ, ವಾಚಾ, ಮನಸ್ಪೂರಕವಾಗಿ ತೀರಿಸುತ್ತ ಬಂದಿದ್ದೇನೆ. ಇದೀಗ ಮತ್ತೆ ಚುನಾವಣೆ ಎದುರಾಗಿದ್ದು, ಯಾವುದೇ ರೀತಿಯ ಖರ್ಚಿಲ್ಲದೆ ಈ ಚುನಾವಣೆ ನಡೆಸುವ ಮೂಲಕ ಹೊಸ ಭಾಷ್ಯ ಬರೆಯೋಣ. ತತ್ವಾದರ್ಶಗಳನ್ನು ಇಟ್ಟುಕೊಂಡು ರಾಜಕೀಯ ಬದುಕು ನಡೆಸಿದ್ದೇನೆ. ಆ ಬಗ್ಗೆ ಮೈಸೂರಿನ ಜನರಿಂದ ರಾಷ್ಟ್ರವ್ಯಾಪಿ ನಾಯಕರಿಗೂ ತಿಳಿದಿದೆ. ಅದು ಹಲವಾರು ದೊಡ್ಡ ದೊಡ್ಡ ವೇದಿಕೆಯಲ್ಲಿ ಚರ್ಚೆ ಆಗಿದೆ. ಅದು ನನ್ನೊಬ್ಬನಿಗೆ ಸಂದ ಗೌರವ ಅಲ್ಲ. ಇಡೀ ಕೃಷ್ಣರಾಜ ಕ್ಷೇತ್ರಕ್ಕೆ ಸಂದ ಗೌರವ ಎಂದರು.

lokesh

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

13 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

13 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

15 hours ago