ಮೈಸೂರು

ವನಸಿರಿನಾಡಲ್ಲಿ ಜೀತ ಪದ್ಧತಿ ಇನ್ನೂ ಜೀವಂತ : ತಾಲೂಕು ಆಡಳಿತದಿಂದ ಸಂತ್ರಸ್ಥರ ರಕ್ಷಣೆ

ಎಚ್.ಡಿ ಕೋಟೆ : ವನಸಿರಿನಾಡು ಹೆಗ್ಗಡದೇವನ ಕೋಟೆಯಲ್ಲಿ ಜೀತ ಪದ್ದತಿ ಇನ್ನೂ ಜೀವಂತವಾಗಿದೆ.

ತಾಲೂಕಿನ ಖೈಲಾಶಪುರ ಗ್ರಾಮದಲ್ಲಿ ನೇಪಾಳ ಮೂಲದ ಮಹಿಳೆ ನಿರ್ಮಲಾ ಹಾಗೂ ಆಕೆಯ ಮಕ್ಕಳನ್ನು ಈರೇಗೌಡ ಎಂಬ ವ್ಯಕ್ತಿ ಅಕ್ರಮವಾಗಿ ಜೀತಕ್ಕಿರಿಸಿಕೊಂಡಿದ್ದರು.

ಜೀತಕ್ಕಿರಿಸಿಕೊಂಡಿರುವ ಸ್ಥಳೀಯರಿಂದ ತಿಳಿಯುತ್ತಿದ್ದಂತೆ ಎಚ್ಚೆತ್ತ ತಾಲೂಕು ಆಡಳಿತ ತಹಶೀಲ್ದಾರ್ ಶ್ರೀನಿವಾಸ್, ಸಿಡಿಪಿಒ ಆಶಾ, ಸಮಾಜ ಕಲ್ಯಾಣ ಇಲಾಖೆ ರಾಮಸ್ವಾಮಿ, ಗಿರಿಜನ ಅಭಿವೃದ್ದಿ ಇಲಾಖೆ ನಾರಾಯಣಸ್ವಾಮಿ ಜೀವಿಕ ಸಂಘಟನೆ ಉಮೇಶ್, ಬಸವರಾಜು ಎಎಸ್ ಐ ಸುಭಾನ್ ತಂಡ ಕಾರ್ಯಾಚರಣೆ ನಡೆಸಿ ಸಂತ್ರಸ್ಥರನ್ನು ರಕ್ಷಿಸಿದ್ದಾರೆ.

ಇನ್ನೂ ತಾಲೂಕು ಆಡಳಿತದ ರಕ್ಷಣೆಯಲ್ಲಿರುವ ನಿರ್ಮಲಾ ಅವರು ನಾವು ಈರೇಗೌಡ ಅವರ ಬಳಿ 48 ಸಾವಿರ ರೂ. ಸಾಲ ಪಡೆದಿದ್ದರಿಂದ ನಮ್ಮನ್ನು ಒಂದೂವರೆ ವರ್ಷದಿಂದ ಜೀತಕ್ಕಿರಿಸಿಕೊಂಡಿದ್ದರು. ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಸರಿಯಾಗಿ ಊಟ ಮತ್ತು ತಿಂಡಿ ಕೊಡುತ್ತಿರಲಿಲ್ಲ. ಬೆಳಗಿನ ಜಾವ 4ರಿಂದ ರಾತ್ರಿ 8ರವರೆಗೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು. 200 ರೂ. ಕೂಲಿ ಕೊಡುತ್ತಿದ್ದರು. 4 ತಿಂಗಳ ಹಿಂದೆ ಜಮೀನಿನಲ್ಲಿ ಕೆಲಸ ಇಲ್ಲದ ಕಾರಣ ಕೊಡಗು ಜಿಲ್ಲೆಗೂ ಕೆಲಸಕ್ಕೆ ಕಳುಹಿಸಿದ್ದರು, ಎಂದು ತಾಲೂಕು ಆಡಳಿತಕ್ಕೆ ತಿಳಿಸಿದ್ದಾರೆ.

ನಿರ್ಮಲಾಳ ಪತಿ ಗೋಪಾಲ ಕೊಡಗು ಜಿಲ್ಲೆಗೆ ಕೆಲಸಕ್ಕೆ ಹೋಗಿದ್ದು, ಇಂದು ಎಚ್.ಡಿ.ಕೋಟೆಗೆ ಬರಲಿದ್ದಾರೆ. ಗೋಪಾಲ ಅವರ ಕುಟುಂಬದವರು ನೇಪಾಳ ಮೂಲದವರಾಗಿದ್ದು, ಕೆಲಸಕ್ಕಾಗಿ 15 ವರ್ಷಗಳ ಹಿಂದೆ ನೇಪಾಳ ಬಿಟ್ಟು ಬಂದಿದ್ದು, ಬೆಂಗಳೂರು, ಶಿವಮೊಗ್ಗ ಮತ್ತಿತರ ಕಡೆ ಕೆಲಸ ಮಾಡಿದ್ದಾರೆ.

ಈ ಕುರಿತು ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಕುಟುಂಬವನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಲಾಗಿದೆ. ಜೀತಕ್ಕೆ ಇರಿಸಿಕೊಂಡಿದ್ದರು ಎನ್ನಲಾದ ಆರೋಪಿ ತಲೆ ಮರೆಸಿಕೊಂಡಿದ್ದಾರೆ, ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

lokesh

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

4 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

4 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

5 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

5 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

6 hours ago