ಮೈಸೂರು : ಕಳೆದ ವಾರದ ಹಿಂದೆ ನಗರದ ಹೃದಯ ಭಾಗದಲ್ಲಿಯೇ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.
ಮೈಸೂರು ಪೊಲೀಸ್ ರೌಡಿ ಪ್ರತಿಬಂಧಕದಳದಿಂದ ಕಾರ್ಯಾಚರಣೆ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಕಳೆದ ಎರಡು ದಿನಗಳಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಶಂಕಿತ ರೌಡಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುವ 691 ಮಂದಿಯನ್ನು ಗುರುತಿಸಿ ಅವರ ಕೋಟ್ಪಾ ಕಾಯ್ದೆ ಮತ್ತು ಪೆಟ್ಟಿ ಕೇಸ್ನ್ನು ದಾಖಲಿಸಲಾಗಿದೆ.
ಇದನ್ನೂ ಓದಿ:-ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ
405 ಮಂದಿ ವಿಚಾರಣೆ
ನಗರದಲ್ಲಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್ ಗಳು, ಟೀ ಅಂಗಡಿಗಳು, ಹೋಟೆಲ್ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇದರೊಂದಿಗೆ ಮೈಸೂರಿನ ದೊಡ್ಡಕೆರೆ ಮೈದಾನ, ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳ, ಜ್ವಾಲಾಮುಖಿ ಪಾರ್ಕಿಂಗ್ ಸ್ಥಳ, ಉದ್ಯಾನವನ, ಆರ್.ಎಂ.ಸಿ ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ನಿರಂತರ ಪೊಲೀಸ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾರ್ಯಾಚರಣೆ ವೇಳೆ 405 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೋಟ್ಪಾ ಕಾಯಿದೆಯಡಿ 204 ಪ್ರಕರಣ, ಕೆಪಿ ಕಾಯಿದೆಯಡಿ 487 ಪೆಟ್ಟಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಸಿಪಿಗಳಾದ ಬಿಂದು ಮಣಿ, ಸುಂದರ್ ರಾಜ್, ಎಲ್ಲಾ ಎಸಿಪಿಗಳು, ಠಾಣೆಗಳ ಇನ್ಸ್ ಪೆಕ್ಟರ್ ಗಳು ಮತ್ತು ಸಿಬ್ಬಂದಿ ಇದ್ದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…