ಮೈಸೂರು : ಕಳೆದ ವಾರದ ಹಿಂದೆ ನಗರದ ಹೃದಯ ಭಾಗದಲ್ಲಿಯೇ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.
ಮೈಸೂರು ಪೊಲೀಸ್ ರೌಡಿ ಪ್ರತಿಬಂಧಕದಳದಿಂದ ಕಾರ್ಯಾಚರಣೆ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಕಳೆದ ಎರಡು ದಿನಗಳಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಶಂಕಿತ ರೌಡಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುವ 691 ಮಂದಿಯನ್ನು ಗುರುತಿಸಿ ಅವರ ಕೋಟ್ಪಾ ಕಾಯ್ದೆ ಮತ್ತು ಪೆಟ್ಟಿ ಕೇಸ್ನ್ನು ದಾಖಲಿಸಲಾಗಿದೆ.
ಇದನ್ನೂ ಓದಿ:-ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ
405 ಮಂದಿ ವಿಚಾರಣೆ
ನಗರದಲ್ಲಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್ ಗಳು, ಟೀ ಅಂಗಡಿಗಳು, ಹೋಟೆಲ್ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇದರೊಂದಿಗೆ ಮೈಸೂರಿನ ದೊಡ್ಡಕೆರೆ ಮೈದಾನ, ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳ, ಜ್ವಾಲಾಮುಖಿ ಪಾರ್ಕಿಂಗ್ ಸ್ಥಳ, ಉದ್ಯಾನವನ, ಆರ್.ಎಂ.ಸಿ ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ನಿರಂತರ ಪೊಲೀಸ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾರ್ಯಾಚರಣೆ ವೇಳೆ 405 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೋಟ್ಪಾ ಕಾಯಿದೆಯಡಿ 204 ಪ್ರಕರಣ, ಕೆಪಿ ಕಾಯಿದೆಯಡಿ 487 ಪೆಟ್ಟಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಸಿಪಿಗಳಾದ ಬಿಂದು ಮಣಿ, ಸುಂದರ್ ರಾಜ್, ಎಲ್ಲಾ ಎಸಿಪಿಗಳು, ಠಾಣೆಗಳ ಇನ್ಸ್ ಪೆಕ್ಟರ್ ಗಳು ಮತ್ತು ಸಿಬ್ಬಂದಿ ಇದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…