ಮೈಸೂರು : ಕಳೆದ ವಾರದ ಹಿಂದೆ ನಗರದ ಹೃದಯ ಭಾಗದಲ್ಲಿಯೇ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.
ಮೈಸೂರು ಪೊಲೀಸ್ ರೌಡಿ ಪ್ರತಿಬಂಧಕದಳದಿಂದ ಕಾರ್ಯಾಚರಣೆ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಕಳೆದ ಎರಡು ದಿನಗಳಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಶಂಕಿತ ರೌಡಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುವ 691 ಮಂದಿಯನ್ನು ಗುರುತಿಸಿ ಅವರ ಕೋಟ್ಪಾ ಕಾಯ್ದೆ ಮತ್ತು ಪೆಟ್ಟಿ ಕೇಸ್ನ್ನು ದಾಖಲಿಸಲಾಗಿದೆ.
ಇದನ್ನೂ ಓದಿ:-ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ
405 ಮಂದಿ ವಿಚಾರಣೆ
ನಗರದಲ್ಲಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್ ಗಳು, ಟೀ ಅಂಗಡಿಗಳು, ಹೋಟೆಲ್ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇದರೊಂದಿಗೆ ಮೈಸೂರಿನ ದೊಡ್ಡಕೆರೆ ಮೈದಾನ, ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳ, ಜ್ವಾಲಾಮುಖಿ ಪಾರ್ಕಿಂಗ್ ಸ್ಥಳ, ಉದ್ಯಾನವನ, ಆರ್.ಎಂ.ಸಿ ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ನಿರಂತರ ಪೊಲೀಸ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾರ್ಯಾಚರಣೆ ವೇಳೆ 405 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೋಟ್ಪಾ ಕಾಯಿದೆಯಡಿ 204 ಪ್ರಕರಣ, ಕೆಪಿ ಕಾಯಿದೆಯಡಿ 487 ಪೆಟ್ಟಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಸಿಪಿಗಳಾದ ಬಿಂದು ಮಣಿ, ಸುಂದರ್ ರಾಜ್, ಎಲ್ಲಾ ಎಸಿಪಿಗಳು, ಠಾಣೆಗಳ ಇನ್ಸ್ ಪೆಕ್ಟರ್ ಗಳು ಮತ್ತು ಸಿಬ್ಬಂದಿ ಇದ್ದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…