ಮೈಸೂರು

ಮೈಸೂರುರಲ್ಲಿ ಸಾಲು ಸಾಲು ಕೊಲೆ, ಹದಗೆಟ್ಟ ಕಾನೂನು ಸುವ್ಯವಸ್ಥೆ : ಎಂಎಲ್‌ಸಿ ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮೈಸೂರಿನಲ್ಲೂ ಸಹ ಹಾಳಾಗಿದೆ ಎಂದು ಎಂಎಲ್‌ಸಿ ವಿಶ್ವನಾಥ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಎಸಿಪಿ ಆಗಿ ಬರಬೇಕಾದರೆ ೧ ಕೋಟಿ ನೀಡಬೇಕಿದೆ. ಇನ್ಸ್‌ಪೆಕ್ಟರ್ ಆಗಲು ೭೫ ಲಕ್ಷ, ಎಸ್‌ಐ ಆಗಲು ೫೦ ಲಕ್ಷ ಕೊಡಬೇಕು. ಇದರ ಪರಿಣಾಮ ರಾಜ್ಯದಲ್ಲಿ ಆಡಳಿತ ಯಂತ್ರ, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಗಂಭೀರ ಆರೋಪ ಮಾಡಿದರು.

ಈಗ ಕರ್ತವ್ಯ ನಿರ್ವಹಿಸುತ್ತಿರುವವರು ಎಲ್ಲ ಅಧಿಕಾರಿಗಳು ಶಾಸಕರ ಕೃಪಾ ಪೋಷಿತರಾಗಿದ್ದು, ಶಾಸಕರು ಆಯಾಯ ಕ್ಷೇತ್ರಗಳ ಮಾಲೀಕರಾಗಿದ್ದಾರೆ. ರಾಜ್ಯದಲ್ಲಿ ಅತ್ಯಾಚಾರ, ಮಕ್ಕಳನ್ನು ಹೊತ್ತುಕೊಂಡು ಹೋಗುವ ಘಟನೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಅವರ ಪುತ್ರ ಯತೀಂದ್ರ ಹಾಗು ಆತನ ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಇದನ್ನು ಕೇಳಲಾಗುತ್ತಿಲ್ಲ ಎಂದು ದೂರಿದರು.

ಇದನ್ನೂ ಓದಿ:-ಮೈಸೂರು | ಹಾಡುಹಗಲೇ ಮತ್ತೊಂದು ಭೀಕರ ಕೊಲೆ , ಪತ್ನಿಯ ಕತ್ತು ಸೀಳಿ ಕೊಂದ ಪತಿ

ಬೊಗಳೆ ಬಿಡುವ ಸಿದ್ದರಾಮಯ್ಯ
ಮಡಿವಾಳರು ಶಾಸಕರಾಗಬೇಕು ಎನ್ನುವ ಸಿಎಂ ಸಿದ್ದರಾಮಯ್ಯ, ಅವರಿಗೆ ಎಲ್ಲಿ ಅವಕಾಶ ಕೊಟ್ಟಿದ್ದೀರಾ?. ತರೀಕೆರೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತವರಿಗೆ ಅವಕಾಶ ಮಾಡಿಕೊಡಿ. ಇದರ ಬಗ್ಗೆ ಮಾತನಾಡದೆ ಸುಮ್ಮನೇ ಬೊಗಳೆ ಬಿಡುವ ಸಿದ್ದರಾಮಯ್ಯ, ಹೋದಲ್ಲೆಲ್ಲಾ ಸುಳ್ಳು ಹೇಳುವ ಮೂಲಕ ನಗೆಪಾಟಲಿಯಾಗಿದ್ದಾರೆ. ಈಗ ತೋರಿಕೆಗಾಗಿ ಮೂರು ಪಟ್ಟೆ ವಿಭೂತಿ, ಮಧ್ಯೆ ಕುಂಕುಮ ಹಾಕಿಕೊಂಡು ನಾನು ಹಿಂದೂ ಎನ್ನುತ್ತಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಮೊದಲು ಸ್ವೀಕಾರ ಮಾಡಿ. ಗಣತಿ ಹೆಸರಿನಲ್ಲಿ ಶಿಕ್ಷಕರನ್ನು ನಿಮ್ಮಿಷ್ಟದಂತೆ ನಡೆಸಿಕೊಳ್ಳುತ್ತಿದ್ದು, ಜನರ ಹಿಂದೆ ಬಾರದೆ ಎಲ್ಲ ದುಡ್ಡಿನ ಹಿಂದೆ ಹೋಗುತ್ತಿದ್ದಾರೆ. ಯಾವುದೇ ಮಾನದಂಡವಿಲ್ಲದೇ ಹಣ ಕೊಡುತ್ತಿದ್ದು, ಯಾರಾದರೂ ಹುಚ್ಚ, ಹೆಣ್ಣು ಮಕ್ಕಳಿಗೆ ಎರಡು ಸಾವಿರ ಕೊಡ್ತಾನಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…

5 mins ago

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…

12 mins ago

ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…

16 mins ago

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…

56 mins ago

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

1 hour ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

2 hours ago