ಮೈಸೂರು

ಮೈಸೂರುರಲ್ಲಿ ಸಾಲು ಸಾಲು ಕೊಲೆ, ಹದಗೆಟ್ಟ ಕಾನೂನು ಸುವ್ಯವಸ್ಥೆ : ಎಂಎಲ್‌ಸಿ ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮೈಸೂರಿನಲ್ಲೂ ಸಹ ಹಾಳಾಗಿದೆ ಎಂದು ಎಂಎಲ್‌ಸಿ ವಿಶ್ವನಾಥ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಎಸಿಪಿ ಆಗಿ ಬರಬೇಕಾದರೆ ೧ ಕೋಟಿ ನೀಡಬೇಕಿದೆ. ಇನ್ಸ್‌ಪೆಕ್ಟರ್ ಆಗಲು ೭೫ ಲಕ್ಷ, ಎಸ್‌ಐ ಆಗಲು ೫೦ ಲಕ್ಷ ಕೊಡಬೇಕು. ಇದರ ಪರಿಣಾಮ ರಾಜ್ಯದಲ್ಲಿ ಆಡಳಿತ ಯಂತ್ರ, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಗಂಭೀರ ಆರೋಪ ಮಾಡಿದರು.

ಈಗ ಕರ್ತವ್ಯ ನಿರ್ವಹಿಸುತ್ತಿರುವವರು ಎಲ್ಲ ಅಧಿಕಾರಿಗಳು ಶಾಸಕರ ಕೃಪಾ ಪೋಷಿತರಾಗಿದ್ದು, ಶಾಸಕರು ಆಯಾಯ ಕ್ಷೇತ್ರಗಳ ಮಾಲೀಕರಾಗಿದ್ದಾರೆ. ರಾಜ್ಯದಲ್ಲಿ ಅತ್ಯಾಚಾರ, ಮಕ್ಕಳನ್ನು ಹೊತ್ತುಕೊಂಡು ಹೋಗುವ ಘಟನೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಅವರ ಪುತ್ರ ಯತೀಂದ್ರ ಹಾಗು ಆತನ ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಇದನ್ನು ಕೇಳಲಾಗುತ್ತಿಲ್ಲ ಎಂದು ದೂರಿದರು.

ಇದನ್ನೂ ಓದಿ:-ಮೈಸೂರು | ಹಾಡುಹಗಲೇ ಮತ್ತೊಂದು ಭೀಕರ ಕೊಲೆ , ಪತ್ನಿಯ ಕತ್ತು ಸೀಳಿ ಕೊಂದ ಪತಿ

ಬೊಗಳೆ ಬಿಡುವ ಸಿದ್ದರಾಮಯ್ಯ
ಮಡಿವಾಳರು ಶಾಸಕರಾಗಬೇಕು ಎನ್ನುವ ಸಿಎಂ ಸಿದ್ದರಾಮಯ್ಯ, ಅವರಿಗೆ ಎಲ್ಲಿ ಅವಕಾಶ ಕೊಟ್ಟಿದ್ದೀರಾ?. ತರೀಕೆರೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತವರಿಗೆ ಅವಕಾಶ ಮಾಡಿಕೊಡಿ. ಇದರ ಬಗ್ಗೆ ಮಾತನಾಡದೆ ಸುಮ್ಮನೇ ಬೊಗಳೆ ಬಿಡುವ ಸಿದ್ದರಾಮಯ್ಯ, ಹೋದಲ್ಲೆಲ್ಲಾ ಸುಳ್ಳು ಹೇಳುವ ಮೂಲಕ ನಗೆಪಾಟಲಿಯಾಗಿದ್ದಾರೆ. ಈಗ ತೋರಿಕೆಗಾಗಿ ಮೂರು ಪಟ್ಟೆ ವಿಭೂತಿ, ಮಧ್ಯೆ ಕುಂಕುಮ ಹಾಕಿಕೊಂಡು ನಾನು ಹಿಂದೂ ಎನ್ನುತ್ತಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಮೊದಲು ಸ್ವೀಕಾರ ಮಾಡಿ. ಗಣತಿ ಹೆಸರಿನಲ್ಲಿ ಶಿಕ್ಷಕರನ್ನು ನಿಮ್ಮಿಷ್ಟದಂತೆ ನಡೆಸಿಕೊಳ್ಳುತ್ತಿದ್ದು, ಜನರ ಹಿಂದೆ ಬಾರದೆ ಎಲ್ಲ ದುಡ್ಡಿನ ಹಿಂದೆ ಹೋಗುತ್ತಿದ್ದಾರೆ. ಯಾವುದೇ ಮಾನದಂಡವಿಲ್ಲದೇ ಹಣ ಕೊಡುತ್ತಿದ್ದು, ಯಾರಾದರೂ ಹುಚ್ಚ, ಹೆಣ್ಣು ಮಕ್ಕಳಿಗೆ ಎರಡು ಸಾವಿರ ಕೊಡ್ತಾನಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

10 mins ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

39 mins ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

1 hour ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

15 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

15 hours ago