ಮೈಸೂರು : ಗಿಲ್ಕಿ ವೆಂಕಟೇಶ್ ಮರ್ಡರ್, ದಸರಾಗೆ ಬಲೂನು ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಸೇರಿ ಹಲವು ಅಪರಾಧ ಕೃತ್ಯಗಳು ಕಳೆದ ಕೆಲ ದಿನಗಳಿಂದ ಮೈಸೂರಲ್ಲಿ ಮೇಲಿಂದ ಮೇಲೆ ನಡೆಯುತ್ತಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ನಾಳೆ ಹಿರಿಯ ಅಧಿಕಾರಿಗಳ ಜೊತೆ ಮೈಸೂರಲ್ಲಿ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ಮೈಸೂರು ಪ್ರವಾಸ ಪಟ್ಟಿ ಬಿಡುಗಡೆಯಾಗಿದ್ದು, ನಾಳೆ ರಾತ್ರಿ 7.25ಕ್ಕೆ ಮೈಸೂರಿಗೆ ತಲುಪಲಿದ್ದಾರೆ. ಕೊಲೆ ಪ್ರಕರಣ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಿದ್ದರಾಮಯ್ಯ ಬಳಿಕ ಬಳಿಕ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಇದನ್ನೂ ಓದಿ:-ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ, ಮೈಸೂರಿಗೆ ಯೆಲ್ಲೋ ಅಲರ್ಟ್
ಅತ್ಯಂತ ಹೀನ ಕೃತ್ಯ
ಬಾಲಕಿ ಅತ್ಯಾಚಾರ ಮತ್ತು ಕೊಲೆ ಘಟನೆ ಬಗ್ಗೆ ಕೇಳಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ ಎಂದು ಸಚಿವ ಹೆಚ್. ಸಿ. ಮಹದೇವಪ್ಪ ಹೇಳಿದ್ದಾರೆ. ವಿಚಾರ ತಿಳಿದ ತಕ್ಷಣವೇ ನಾನು ಪೊಲೀಸ್ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. 24 ಗಂಟೆಯಲ್ಲಿ ಆರೋಪಿಯನ್ನ ಬಂಧಿಸುವಂತೆ ಸೂಚಿಸಿದ್ದೆ. ಇದೊಂದು ಅತ್ಯಂತ ಹೀನ ಕೃತ್ಯವಾಗಿದ್ದು, ನಾಗರಿಕ ಸಮಾಜ ಇಂತಹ ಘಟನೆಗಳನ್ನು ಖಂಡಿಸಬೇಕು ಎಂದಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…