ಮೈಸೂರು : ಗಿಲ್ಕಿ ವೆಂಕಟೇಶ್ ಮರ್ಡರ್, ದಸರಾಗೆ ಬಲೂನು ಮಾರಲು ಬಂದಿದ್ದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಸೇರಿ ಹಲವು ಅಪರಾಧ ಕೃತ್ಯಗಳು ಕಳೆದ ಕೆಲ ದಿನಗಳಿಂದ ಮೈಸೂರಲ್ಲಿ ಮೇಲಿಂದ ಮೇಲೆ ನಡೆಯುತ್ತಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ನಾಳೆ ಹಿರಿಯ ಅಧಿಕಾರಿಗಳ ಜೊತೆ ಮೈಸೂರಲ್ಲಿ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ಮೈಸೂರು ಪ್ರವಾಸ ಪಟ್ಟಿ ಬಿಡುಗಡೆಯಾಗಿದ್ದು, ನಾಳೆ ರಾತ್ರಿ 7.25ಕ್ಕೆ ಮೈಸೂರಿಗೆ ತಲುಪಲಿದ್ದಾರೆ. ಕೊಲೆ ಪ್ರಕರಣ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಿದ್ದರಾಮಯ್ಯ ಬಳಿಕ ಬಳಿಕ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಇದನ್ನೂ ಓದಿ:-ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ, ಮೈಸೂರಿಗೆ ಯೆಲ್ಲೋ ಅಲರ್ಟ್
ಅತ್ಯಂತ ಹೀನ ಕೃತ್ಯ
ಬಾಲಕಿ ಅತ್ಯಾಚಾರ ಮತ್ತು ಕೊಲೆ ಘಟನೆ ಬಗ್ಗೆ ಕೇಳಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ ಎಂದು ಸಚಿವ ಹೆಚ್. ಸಿ. ಮಹದೇವಪ್ಪ ಹೇಳಿದ್ದಾರೆ. ವಿಚಾರ ತಿಳಿದ ತಕ್ಷಣವೇ ನಾನು ಪೊಲೀಸ್ ಕಮಿಷನರ್ ಜೊತೆಗೆ ಮಾತನಾಡಿದ್ದೇನೆ. 24 ಗಂಟೆಯಲ್ಲಿ ಆರೋಪಿಯನ್ನ ಬಂಧಿಸುವಂತೆ ಸೂಚಿಸಿದ್ದೆ. ಇದೊಂದು ಅತ್ಯಂತ ಹೀನ ಕೃತ್ಯವಾಗಿದ್ದು, ನಾಗರಿಕ ಸಮಾಜ ಇಂತಹ ಘಟನೆಗಳನ್ನು ಖಂಡಿಸಬೇಕು ಎಂದಿದ್ದಾರೆ.
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…