ಮೈಸೂರು

ಬಂಡಿಪಾಳ್ಯ ʻಎಪಿಎಂಸಿʼಯಲ್ಲಿ ಸರಣಿ ಕಳವು : ರೋಲಿಂಗ್ ಶಟರ್ ಮೀಟಿ ನಗದು,ಅಕ್ಕಿ ದೋಚಿದ ಕಳ್ಳರು

ಮೈಸೂರು : ನಂಜನಗೂಡು ರಸ್ತೆಯಲ್ಲಿರುವ ಬಂಡಿಪಾಳ್ಳ ಎಪಿಎಂಸಿ ಯಾರ್ಡ್‌ನಲ್ಲಿ ಗುರುವಾರ ರಾತ್ರಿ ಕಳ್ಳರು ಮೂರು ಅಂಗಡಿಗಳ ರೋಲಿಂಗ್ ಶಟರ್‌ಗಳನ್ನು ಮೀಟಿ, ಅಂಗಡಿಗಳ ಒಳಗೆ ನುಗ್ಗಿ ನಗದು ಮತ್ತು ಅಕ್ಕಿ ಮೂಟೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಮಹಿಂದ್ರಾ ಮಿನಿ ಗೂಡ್ಸ್ ವಾಹನದಲ್ಲಿ ಬಂದಿರುವ ಕಳ್ಳರು, ಮೊದಲು ತಾಜ್ ಎಂಟರ್ ಪ್ರೈಸಸ್ ಅಂಗಡಿಯ ರೋಲಿಂಗ್ ಶಟರ್ ಅನ್ನು ಕಬ್ಬಿಣದ ಕಂಬ ಮತ್ತು ಮರದ ಕಂಬಗಳನ್ನು ಬಳಸಿ ಮೀಟಿ ಅಂಗಡಿ ಒಳಗೆ ನುಗ್ಗಿ ಅಲ್ಲಿದ್ದ ಕ್ಯಾಶ್ ಟೇಬಲ್ ಬೀಗ ಒಡೆದು ಸುಮಾರು ೧.೬೦ ಲಕ್ಷ ರೂ. ನಗದು ದೋಚಿದ್ದಾರೆ. ಬಳಿಕ ಎಳ್ಳಿನ ಮೂಟೆಯನ್ನು ಚೆಲ್ಲಾಡಿ ಕ್ಯಾಶ್ ಟೇಬಲ್ ಅನ್ನು ಕಾಳುಗಳ ಮೂಟೆಯ ಮೇಲೆ ಎಸೆದು ಹೋಗಿದ್ದಾರೆ. ಬಳಿಕ ಕಳ್ಳರು ಪಕ್ಕದಲ್ಲೇ ಇದ್ದ ರಾಘವೇಂದ್ರ ಟ್ರೇಡಿಂಗ್ ಕಂಪನಿ ಅಂಗಡಿಯ ರೋಲಿಂಗ್ ಶಟರ್ ಮೀಟಲು ಯತ್ನಿಸಿ ಅದು ಅಸಾಧ್ಯವಾದಾಗ ಮತ್ತೊಂದು ಅಕ್ಕಿ ಅಂಗಡಿಯ ರೋಲಿಂಗ್ ಶಟರ್ ಮೀಟಿ ಅಲ್ಲಿ ಸುಮಾರು ೨೦ಕ್ಕೂ ಹೆಚ್ಚು ಅಕ್ಕಿ ಮೂಟೆಗಳನ್ನು ಕಳವು ಮಾಡಿದ್ದಾರೆ.

ಕಳ್ಳರು ಅಕ್ಕಿ ಅಂಗಡಿಗೆ ನುಗ್ಗಿ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂವರು ಕಳ್ಳರು ಅಂಗಡಿ ಒಳಗೆ ನುಗ್ಗಿ ಕ್ಯಾಶ್ ಟೇಬಲ್‌ನಲ್ಲಿ ಹುಡುಕಾಟ ನಡೆಸುತ್ತಿರುವ ದೃಶ್ಯ ಮತ್ತು ಉರ್ದು ಭಾಷೆಯಲ್ಲಿ ಪರಸ್ಪರ ಬೈದಾಡಿಕೊಳ್ಳುತ್ತಿರುವ ಮಾತುಗಳೂ ಸಹ ಸ್ಪಷ್ಟವಾಗಿ ಕೇಳಿಸುತ್ತಿದೆ.

ಈ ಹಿಂದೆ ನಂಜನಗೂಡಿನಲ್ಲಿ ಕಳುವು ಮಾಡಿದ ತಂಡದಿಂದಲೇ ಇಲ್ಲೂ ಕಳ್ಳತನ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂಜನಗೂಡು ತಾಲೂಕು ತಗಡೂರು ಗ್ರಾಮದ ವೈನ್‌ಸ್ಟೋರ್‌ನಲ್ಲಿ ನಡೆದ ಕಳುವು ಪ್ರಕರಣದಲ್ಲಿ ಭಾಗಿಯಾಗಿರುವ ತಂಡವೇ ಬಂಡೀಪಾಳ್ಯದಲ್ಲೂ ಕೃತ್ಯವೆಸಗಿದೆ ಎಂದು ಶಂಕಿಸಲಾಗಿದೆ.

ಎರಡು ಪ್ರಕರಣಗಳಲ್ಲೂ ಒಂದೇ ರೀತಿ ಕೃತ್ಯವೆಸಗಿದ್ದಾರೆ. ಕಬ್ಬಿಣದ ರಾಡ್‌ಗಳಿಂದಲ್ಲೇ ರೋಲಿಂಗ್ ಶೆಟರ್‌ಗಳನ್ನ ಮೀಟಿರುವುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ. ಸಧ್ಯ ಕಳ್ಳರ ಪತ್ತೆಗೆ ಜಿಲ್ಲಾ ಪೊಲೀಸರು ಜಾಲ ಬೀಸಿದ್ದಾರೆ.

ಅಸಮರ್ಪಕ ಪೊಲೀಸ್ ಬೀಟ್ ವ್ಯವಸ್ಥೆ ಬಂಡಿಪಾಳ್ಯ ಎಪಿಎಂಸಿ ಯಾರ್ಡ್‌ನಲ್ಲಿ ಈ ಹಿಂದೆಯೂ ಹಲವು ಕಳ್ಳತನಗಳು ನಡೆದಿದೆ. ಕಳ್ಳರು ಕದಿಯುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದರೂ, ಪೊಲೀಸರು ಕಳ್ಳರನ್ನು ಬಂಧಿಸಿಲ್ಲ, ಇದೊಂದು ಕೊಟ್ಯಾಂತರ ರೂ. ವ್ಯವಹಾರ ನಡೆಸುವ ವಾಣಿಜ್ಯ ಕೇಂದ್ರವಾಗಿದ್ದರೂ ಇಲ್ಲಿ ಸಮಪರ್ಕವಾದ ಪೊಲೀಸ್ ಬೀಟ್ ವ್ಯವಸ್ಥೆ ಇಲ್ಲ ಎಂದು ಅಂಗಡಿಗಳ ಮಾಲೀಕರು ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago