ಮೈಸೂರು

ಜೆ.ಪಿ ನಗರದಲ್ಲಿ ರಸ್ತೆಗೆ ಒಳಚರಂಡಿ ನೀರು; ರೋಗ ಹರಡುವ ಆತಂಕ

ಮೈಸೂರು: ತಾಲೂಕಿನ ಕೆ. ಸಾಲುಂಡಿ ಗ್ರಾಮದ ಕಲುಷಿತ ನೀರು ಪ್ರಕರಣ ಮಾಸುವ ಮುನ್ನವೇ  ನಗರದ ಪ್ರತಿಷ್ಠಿತ ಬಡವಾಣೆಗಳಲ್ಲಿ ಒಂದಾದ ಜೆಪಿ ನಗರದಲ್ಲಿ  ಇಂತದ್ದೆ  ಪ್ರಕರಣ ಮರುಕಳಿಸುವ ಸಾಧ್ಯತೆಗಳು ಕಂಡು ಬರುತ್ತಿದೆ. ಈ ಕುರಿತಾದ ವಿಶೇಷ ಸ್ಟೋರಿಯೊಂದನ್ನು ಆಂದೋಲನ ಬಳಗ ಮಾಡಿದೆ.

ಇಲ್ಲಿನ ಜೆಪಿ ನಗರದಲ್ಲಿ ಒಳ ಚರಂಡಿ ತುಂಬಿ ಕೊಳಚೆ ನೀರು ರಸ್ತೆ ತುಂಬಾ ಹರಿಯುತ್ತಿದ್ದು, ಸ್ಥಳೀಯರಿಗೆ ರೋಗಗಳ ಭಯ ಹೆಚ್ಚಾಗಿದೆ. ಕೆಲವು ದಿನಗಳ ಹಿಂದೆ ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ಯುವಕನೊಬ್ಬ ಕಲುಷಿತ ನೀರು ಕುಡಿದು ಸಾವನ್ನಪ್ಪಿದ್ದ ಪ್ರಕರಣ ಮರೆ ಮಾಚುವ ಮುನ್ನವೇ ನಗರದ ಜೆಪಿ ನಗರ ಬಡಾವಣೆಯಲ್ಲಿ ಮತ್ತೊಂದು ಪ್ರಕರಣ ಎದುರಾಗಿದೆ.

ಹವಾಮಾನ ವೈಪರಿತ್ಯದಿಂದ ಉಂಟಾದ ಮಳೆಯಿಂದಾಗಿ ಜಿಪಿ ನಗರ ಬಡಾವಣೆಯಲ್ಲಿ ಒಳಚರಂಡಿಗಳು ತುಂಬಿದ್ದು, ಕೊಳಚೆ ನೀರು ರಸ್ತೆ, ಮನೆಯ ಮುಂದೆ ಹರಿಯುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರಿಗೆ ಎಷ್ಟೇ ದೂರು ನೀಡಿದರು ಏನು ಪ್ರಯೋಜವಾಗಿಲ್ಲ.

ಹೀಗಾಗಿ ಅಲ್ಲಿನ ಸ್ಥಳೀಯರು, ಈ ಸಂಬಂಧ ಇನ್ನೆರೆಡು ದಿನಗಳಲ್ಲಿ ಕ್ರಮ ಕೈಗೊಳ್ಳದೇ ಹೋದರೇ, ಪಾಲಿಕೆ ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಒಳಚರಂಡಿ ನೀರು ರಸ್ತೆ ಮೇಲೆ ಹರಿದಾಡುತ್ತಿರುದರಿಂದ ಮಕ್ಕಳು ಮತ್ತು ವಯಸ್ಸಾದವರಲ್ಲಿ ಹಲವಾರು ಖಾಯಿಲೆಗಳು ಕಂಡು ಬರುತ್ತಿದೆ. ಈ ಬಗ್ಗೆ ಎಷ್ಟು ಹೇಳಿದರು ಪಾಲಿಕೆ ನಿರ್ಲಕ್ಷ್ಯ ವಹಿಸುತ್ತಿರುವುದಕ್ಕೆ ಬಡಾವಣೆ ಜನರು ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸ್ಥಳಿಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಆಂದೋಲನ ಬಳಗ, ಅಲ್ಲಿನ ಜನರ ಕೂಗುಗಳಿಗೆ ಧನಿಯಾಯಿತು.

ವರದಿ: ಪ್ರದ್ಯುಮ್ನ ಎನ್‌.ಎಂ
ಕ್ಯಾಮರಮೆನ್‌: ಮಧುಚಂದ್ರ ಶೆಟ್ಟಿ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago