ಮೈಸೂರು: ತಾಲೂಕಿನ ಕೆ. ಸಾಲುಂಡಿ ಗ್ರಾಮದ ಕಲುಷಿತ ನೀರು ಪ್ರಕರಣ ಮಾಸುವ ಮುನ್ನವೇ ನಗರದ ಪ್ರತಿಷ್ಠಿತ ಬಡವಾಣೆಗಳಲ್ಲಿ ಒಂದಾದ ಜೆಪಿ ನಗರದಲ್ಲಿ ಇಂತದ್ದೆ ಪ್ರಕರಣ ಮರುಕಳಿಸುವ ಸಾಧ್ಯತೆಗಳು ಕಂಡು ಬರುತ್ತಿದೆ. ಈ ಕುರಿತಾದ ವಿಶೇಷ ಸ್ಟೋರಿಯೊಂದನ್ನು ಆಂದೋಲನ ಬಳಗ ಮಾಡಿದೆ.
ಇಲ್ಲಿನ ಜೆಪಿ ನಗರದಲ್ಲಿ ಒಳ ಚರಂಡಿ ತುಂಬಿ ಕೊಳಚೆ ನೀರು ರಸ್ತೆ ತುಂಬಾ ಹರಿಯುತ್ತಿದ್ದು, ಸ್ಥಳೀಯರಿಗೆ ರೋಗಗಳ ಭಯ ಹೆಚ್ಚಾಗಿದೆ. ಕೆಲವು ದಿನಗಳ ಹಿಂದೆ ಜಿಲ್ಲೆಯ ಕೆ.ಸಾಲುಂಡಿ ಗ್ರಾಮದಲ್ಲಿ ಯುವಕನೊಬ್ಬ ಕಲುಷಿತ ನೀರು ಕುಡಿದು ಸಾವನ್ನಪ್ಪಿದ್ದ ಪ್ರಕರಣ ಮರೆ ಮಾಚುವ ಮುನ್ನವೇ ನಗರದ ಜೆಪಿ ನಗರ ಬಡಾವಣೆಯಲ್ಲಿ ಮತ್ತೊಂದು ಪ್ರಕರಣ ಎದುರಾಗಿದೆ.
ಹವಾಮಾನ ವೈಪರಿತ್ಯದಿಂದ ಉಂಟಾದ ಮಳೆಯಿಂದಾಗಿ ಜಿಪಿ ನಗರ ಬಡಾವಣೆಯಲ್ಲಿ ಒಳಚರಂಡಿಗಳು ತುಂಬಿದ್ದು, ಕೊಳಚೆ ನೀರು ರಸ್ತೆ, ಮನೆಯ ಮುಂದೆ ಹರಿಯುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರಿಗೆ ಎಷ್ಟೇ ದೂರು ನೀಡಿದರು ಏನು ಪ್ರಯೋಜವಾಗಿಲ್ಲ.
ಹೀಗಾಗಿ ಅಲ್ಲಿನ ಸ್ಥಳೀಯರು, ಈ ಸಂಬಂಧ ಇನ್ನೆರೆಡು ದಿನಗಳಲ್ಲಿ ಕ್ರಮ ಕೈಗೊಳ್ಳದೇ ಹೋದರೇ, ಪಾಲಿಕೆ ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಒಳಚರಂಡಿ ನೀರು ರಸ್ತೆ ಮೇಲೆ ಹರಿದಾಡುತ್ತಿರುದರಿಂದ ಮಕ್ಕಳು ಮತ್ತು ವಯಸ್ಸಾದವರಲ್ಲಿ ಹಲವಾರು ಖಾಯಿಲೆಗಳು ಕಂಡು ಬರುತ್ತಿದೆ. ಈ ಬಗ್ಗೆ ಎಷ್ಟು ಹೇಳಿದರು ಪಾಲಿಕೆ ನಿರ್ಲಕ್ಷ್ಯ ವಹಿಸುತ್ತಿರುವುದಕ್ಕೆ ಬಡಾವಣೆ ಜನರು ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಥಳಿಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಆಂದೋಲನ ಬಳಗ, ಅಲ್ಲಿನ ಜನರ ಕೂಗುಗಳಿಗೆ ಧನಿಯಾಯಿತು.
ವರದಿ: ಪ್ರದ್ಯುಮ್ನ ಎನ್.ಎಂ
ಕ್ಯಾಮರಮೆನ್: ಮಧುಚಂದ್ರ ಶೆಟ್ಟಿ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…