ಮೈಸೂರು: ಸಾಲ ವಸೂಲಿಯ ಹಣಕ್ಕೆ ಪಟ್ಟು ಹಿಡಿದ ವ್ಯಕ್ತಿಯೋರ್ವ ಮನೆ ಮುಂದೆ ಬಂದು ಗೃಹಿಣಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಗರದ ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಸನ್ನ ಎಂಬ ವ್ಯಕ್ತಿಯೇ ಗೃಹಿಣಿಗೆ ಲೈಂಗಿಕ ಕಿರುಕುಳ ನೀಡಿದವನು. ನಾಗನಹಳ್ಳಿಯ ರಘು ಎಂಬುವವರು ಚಿಕಿತ್ಸೆಗಾಗಿ ಪ್ರಸನ್ನ ಬಳಿ 7 ಸಾವಿರ ಸಾಲ ಪಡೆದಿದ್ದಾರೆ. ಈ ಹಣಕ್ಕೆ 20% ಬಡ್ಡಿಯನ್ನೂ ನೀಡುತ್ತಾ ಬಂದಿದ್ದಾರೆ. ಅಸಲನ್ನು 6 ತಿಂಗಳ ನಂತರ ಕೊಡುವುದಾಗಿ ರಘು ತಿಳಿಸಿದ್ದಾರೆ. ಇದಕ್ಕೆ ಒಪ್ಪದ ಪ್ರಸನ್ನ ಹಣಕ್ಕೆ ಪಟ್ಟು ಹಿಡಿದು ಮನೆ ಹತ್ತಿರ ಬಂದು ರಘು ಪತ್ನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಬಟ್ಟೆ ಬಿಚ್ಚಿ ನಿಂತು ಬಾ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ರಘು ಪತ್ನಿ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…
ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…