ಮೈಸೂರು: ಸಾಲ ವಸೂಲಿಯ ಹಣಕ್ಕೆ ಪಟ್ಟು ಹಿಡಿದ ವ್ಯಕ್ತಿಯೋರ್ವ ಮನೆ ಮುಂದೆ ಬಂದು ಗೃಹಿಣಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಗರದ ಮೇಟಗಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಸನ್ನ ಎಂಬ ವ್ಯಕ್ತಿಯೇ ಗೃಹಿಣಿಗೆ ಲೈಂಗಿಕ ಕಿರುಕುಳ ನೀಡಿದವನು. ನಾಗನಹಳ್ಳಿಯ ರಘು ಎಂಬುವವರು ಚಿಕಿತ್ಸೆಗಾಗಿ ಪ್ರಸನ್ನ ಬಳಿ 7 ಸಾವಿರ ಸಾಲ ಪಡೆದಿದ್ದಾರೆ. ಈ ಹಣಕ್ಕೆ 20% ಬಡ್ಡಿಯನ್ನೂ ನೀಡುತ್ತಾ ಬಂದಿದ್ದಾರೆ. ಅಸಲನ್ನು 6 ತಿಂಗಳ ನಂತರ ಕೊಡುವುದಾಗಿ ರಘು ತಿಳಿಸಿದ್ದಾರೆ. ಇದಕ್ಕೆ ಒಪ್ಪದ ಪ್ರಸನ್ನ ಹಣಕ್ಕೆ ಪಟ್ಟು ಹಿಡಿದು ಮನೆ ಹತ್ತಿರ ಬಂದು ರಘು ಪತ್ನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಬಟ್ಟೆ ಬಿಚ್ಚಿ ನಿಂತು ಬಾ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ರಘು ಪತ್ನಿ ಮೇಟಗಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…