ನಂಜನಗೂಡು: ಇಲ್ಲಿನ ಶೃಂಗೇರಿ ಶಂಕರ ಮಠದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಪ್ರಸಕ್ತ ವರ್ಷದ ಶಂಕರ ಜಯಂತಿಯು ಮೇ ೯ರ ಗುರುವಾರದಿಂದ ೧೨ರವರೆಗೂ ನಡೆಯಲಿದೆ. ಈ ನಾಲ್ಕೂ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ ಭಜನೆ, ಭಕ್ತಿಗೀತೆ ಹಾಗೂ ಭರತ ನಾಟ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಯಂತಿಯ ಕೊನೆದಿನವಾದ ಭಾನುವಾರ ಶಂಕರ ಭಗವತ್ಪಾದರ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ. ನಂತರ ಮಠದ ಆಶ್ರಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮಾಜ ಸೇವಕ ಎಂ.ಎನ್.ಪದ್ಮನಾಭರಾವ್ ಮತ್ತು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಆರ್.ಗೋವರ್ಧನ್ ಭಾಗಿಯಾಗಲಿದ್ದಾರೆ ಎಂದು ಮಠದ ಧರ್ವಾಧಿಕಾರಿ ಶ್ರೀಕಂಠ ಜೋಸ್ ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…