ಮೈಸೂರು

ಧರ್ಮ ರಕ್ಷಣೆಗಾಗಿ ಜೀವನ ಮುಡುಪಿಟ್ಟ ಶಂಕರಾಚಾರ್ಯರು: ಶ್ರೀವತ್ಸ

ಮೈಸೂರು:  ಶಂಕರಾಚಾರ್ಯರು ವೇದ, ಉಪನಿಷತ್ತು, ವೇದಮಂತ್ರಗಳು, ದೇವರು ಸತ್ಯ ಎನ್ನುವುದನ್ನು ಜನರಲ್ಲಿ ಬಿಂಬಿಸಿ, ದೇಶ ಸಂಚರಿಸುತ್ತಾ ತಮ್ಮ ಜೀವನವನ್ನೇ ಧರ್ಮರಕ್ಷಣೆಗಾಗಿ ಮೀಸಲಿಟ್ಟ ಅವತಾರ ಪುರುಷ ಎಂದು ಶಾಸಕ ಶ್ರೀವತ್ಸ ಬಣ್ಣಿಸಿದರು.

ಇಂದು(ಮೇ.೧೩) ನಗರದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶಂಕರಮಠದಲ್ಲಿ ವಿಪ್ರ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ  ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಅಂಗವಾಗಿ  ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಶಂಕರಾಚಾರ್ಯರು ತಮ್ಮ ಎಂಟನೇ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕರಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿ ಸನಾತನ ಹಿಂದೂ ಸಂಸ್ಕೃತಿಯನ್ನು ಮರುಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.

ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಮಾತನಾಡಿ ಶಂಕರಾಚಾರ್ಯರ ಬದುಕನ್ನು ಸಮಚಿತ್ತದಿಂದ ಅವಲೋಕಿಸಿದಾಗ ಮಾತ್ರ ಭಾರತೀಯ ಅಧ್ಯಾತ್ಮಿಕ ಪರಂಪರೆಗೆ ಅವರ ಕೊಡುಗೆ ಏನು ಎಂಬುದು ಅರಿವಾಗುವುದು ಎಂದು ಹೇಳಿದರು.

ಭವ್ಯ ಮೆರವಣಿಗೆ : ಆದಿ ಗುರು ಶ್ರೀ ಶಂಕರಾಚಾರ್ಯರ   ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿರಿಸಿ ವಿದ್ಯಾರಣ್ಯಪುರಂ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು, ವಿಶೇಷವಾಗಿ ಮಕ್ಕಳು ಬಾಲ ಶಂಕರ ವೇಶವನ್ನು ಧರಿಸಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಾದಸ್ವರ ಹಾಗೂ ಶಂಕರಾಚಾರ್ಯ ಕೀರ್ತನೆಗಳನ್ನು ಹೇಳುತ್ತಾ ಭಜನೆ, ದೇವರ ನಾಮ, ಸಂಕೀರ್ತಿಗಳನ್ನು ಹಾಡುತ್ತಾ ಮೆರವಣಿಗೆಯಲ್ಲಿ ನೂರಾರು ಭಕ್ಯಾದಿಗಳು ಸಾಗಿದ್ದು ಸಾರ್ವಜನಿಕರ ಗಮನ ಸೆಳೆಯಿತು.

ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಮಾಜಿನಗರ ಪಾಲಿಕಾ ಸದಸ್ಯ ಮಾ ವಿ ರಾಮಪ್ರಸಾದ್, ವಿಪ್ರ ಸಂಗಮ ಅಧ್ಯಕ್ಷ ಡಾಕ್ಟರ್ ಲಕ್ಷ್ಮಿ, ಗ್ರಾಮಾಂತರ ಅಧ್ಯಕ್ಷ ಗೋಪಾಲ್ ರಾವ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ವಿಪ್ರ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಆರ್ ನಾಗರಾಜ್, ಕಾರ್ಯದರ್ಶಿ ಮುಳ್ಳೂರು ಸುರೇಶ್, ಸಹ ಕಾರ್ಯದರ್ಶಿ ಎಚ್ ಸಿ ಮುರುಗೇಶ್, ಖಜಾಂಜಿ ಎಂ ವಿ ಮಂಜುನಾಥ್, ಸುಚಿಂದ್ರ ತೀರ್ಥ, ಶ್ರೀಕಾಂತ್ ಕಶ್ಯಪ್  ಸೇರಿದಂತೆ ಮುಂತಾದವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

3 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

5 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

7 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago