ಮೈಸೂರು

ಧರ್ಮ ರಕ್ಷಣೆಗಾಗಿ ಜೀವನ ಮುಡುಪಿಟ್ಟ ಶಂಕರಾಚಾರ್ಯರು: ಶ್ರೀವತ್ಸ

ಮೈಸೂರು:  ಶಂಕರಾಚಾರ್ಯರು ವೇದ, ಉಪನಿಷತ್ತು, ವೇದಮಂತ್ರಗಳು, ದೇವರು ಸತ್ಯ ಎನ್ನುವುದನ್ನು ಜನರಲ್ಲಿ ಬಿಂಬಿಸಿ, ದೇಶ ಸಂಚರಿಸುತ್ತಾ ತಮ್ಮ ಜೀವನವನ್ನೇ ಧರ್ಮರಕ್ಷಣೆಗಾಗಿ ಮೀಸಲಿಟ್ಟ ಅವತಾರ ಪುರುಷ ಎಂದು ಶಾಸಕ ಶ್ರೀವತ್ಸ ಬಣ್ಣಿಸಿದರು.

ಇಂದು(ಮೇ.೧೩) ನಗರದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶಂಕರಮಠದಲ್ಲಿ ವಿಪ್ರ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ  ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಅಂಗವಾಗಿ  ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಶಂಕರಾಚಾರ್ಯರು ತಮ್ಮ ಎಂಟನೇ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕರಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿ ಸನಾತನ ಹಿಂದೂ ಸಂಸ್ಕೃತಿಯನ್ನು ಮರುಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.

ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಮಾತನಾಡಿ ಶಂಕರಾಚಾರ್ಯರ ಬದುಕನ್ನು ಸಮಚಿತ್ತದಿಂದ ಅವಲೋಕಿಸಿದಾಗ ಮಾತ್ರ ಭಾರತೀಯ ಅಧ್ಯಾತ್ಮಿಕ ಪರಂಪರೆಗೆ ಅವರ ಕೊಡುಗೆ ಏನು ಎಂಬುದು ಅರಿವಾಗುವುದು ಎಂದು ಹೇಳಿದರು.

ಭವ್ಯ ಮೆರವಣಿಗೆ : ಆದಿ ಗುರು ಶ್ರೀ ಶಂಕರಾಚಾರ್ಯರ   ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿರಿಸಿ ವಿದ್ಯಾರಣ್ಯಪುರಂ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು, ವಿಶೇಷವಾಗಿ ಮಕ್ಕಳು ಬಾಲ ಶಂಕರ ವೇಶವನ್ನು ಧರಿಸಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಾದಸ್ವರ ಹಾಗೂ ಶಂಕರಾಚಾರ್ಯ ಕೀರ್ತನೆಗಳನ್ನು ಹೇಳುತ್ತಾ ಭಜನೆ, ದೇವರ ನಾಮ, ಸಂಕೀರ್ತಿಗಳನ್ನು ಹಾಡುತ್ತಾ ಮೆರವಣಿಗೆಯಲ್ಲಿ ನೂರಾರು ಭಕ್ಯಾದಿಗಳು ಸಾಗಿದ್ದು ಸಾರ್ವಜನಿಕರ ಗಮನ ಸೆಳೆಯಿತು.

ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಮಾಜಿನಗರ ಪಾಲಿಕಾ ಸದಸ್ಯ ಮಾ ವಿ ರಾಮಪ್ರಸಾದ್, ವಿಪ್ರ ಸಂಗಮ ಅಧ್ಯಕ್ಷ ಡಾಕ್ಟರ್ ಲಕ್ಷ್ಮಿ, ಗ್ರಾಮಾಂತರ ಅಧ್ಯಕ್ಷ ಗೋಪಾಲ್ ರಾವ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ವಿಪ್ರ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಆರ್ ನಾಗರಾಜ್, ಕಾರ್ಯದರ್ಶಿ ಮುಳ್ಳೂರು ಸುರೇಶ್, ಸಹ ಕಾರ್ಯದರ್ಶಿ ಎಚ್ ಸಿ ಮುರುಗೇಶ್, ಖಜಾಂಜಿ ಎಂ ವಿ ಮಂಜುನಾಥ್, ಸುಚಿಂದ್ರ ತೀರ್ಥ, ಶ್ರೀಕಾಂತ್ ಕಶ್ಯಪ್  ಸೇರಿದಂತೆ ಮುಂತಾದವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

58 seconds ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

30 mins ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

2 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

2 hours ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

3 hours ago